ಸಿದ್ದರಾಮಯ್ಯ CM ಆಗಿದ್ದಾಗ ಅರ್ಕಾವತಿ ಡಿನೋಟಿಫಿಕೇಷನ್ ಹಗರಣ
ವಿಧಾನಸಭೆ ಚುನಾವಣೆ ಹೊತ್ತಲ್ಲಿ ಸಿದ್ದು ವಿರುದ್ಧ CM ಗಂಭೀರ ಆರೋಪ
ಆರೋಪಿಗಳನ್ನು ಜೈಲಿಗೆ ಕಳುಹಿಸುತ್ತೇವೆ ಎಂದಿರುವ ಬಸವರಾಜ್ ಬೊಮ್ಮಾಯಿ
ವಿಧಾನಸಭೆ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ 8 ಸಾವಿರ ಕೋಟಿ ರೂಪಾಯಿಗಳ ಬೃಹತ್ ಹಗರಣ ನಡೆದಿದೆ ಎಂದು ವಿಧಾನಸಭಾ ಕಲಾಪದಲ್ಲಿ ಸಿಎಂ ಬೊಮ್ಮಾಯಿ ಆರೋಪಿಸಿದ್ದಾರೆ. ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತು ನ್ಯಾ.ಕೆಂಪಣ್ಣ ಆಯೋಗ ಸಲ್ಲಿಸಿದ್ದ ವರದಿಯನ್ನ ಆಧಾರಿಸಿ ಸಿಎಂ ಬೊಮ್ಮಾಯಿ ಈ ವಿಷಯವನ್ನು ಪ್ರಸ್ತಾಪಿಸಿದರು.
ಜಮೀನು ಮಾಲೀಕರ ಹಿತಾಸಕ್ತಿಗಾಗಿ 800ಕ್ಕೂ ಹೆಚ್ಚು ಎಕರೆ ಜಮೀನು ಅನ್ನು ರೀಡೂ ಹೆಸರಲ್ಲಿ ಡಿನೋಟಿಫಿಕೇಷನ್ ಆಗಿರುವುದು ನಿಜ. ಇದು ವರದಿಯಲ್ಲಿ ಸ್ಪಷ್ಟವಾಗಿದೆ. ಈ ವರದಿ ಬಗ್ಗೆ ಯಾವ ಕ್ರಮ ಕೈಗೊಳ್ಳದೇ ಸಿದ್ದರಾಮಯ್ಯ ತಮ್ಮ ಅವಧಿಯ ಹಗರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿ ತಪ್ಪಿತಸ್ಥರನ್ನ ಜೈಲಿಗೆ ಕಳುಹಿಸುತ್ತೇವೆ ಎಂದು ಸಿಎಂ ಹೇಳಿದರು.
ಸುಳ್ಳು ಭ್ರಷ್ಟಾಚಾರ ಆರೋಪ ಮಾಡಬೇಡಿ. ಕಾಂಗ್ರೆಸ್ನವರು ಗುತ್ತಿಗೆದಾರ ಕೆಂಪಣ್ಣರನ್ನ ಕರೆ ತಂದರೆ ನಮಗೆ ನ್ಯಾ.ಕೆಂಪಣ್ಣ ಬರುತ್ತಾರೆ. ಅರ್ಕಾವತಿ ಬಡಾವಣೆಗಾಗಿ ಸ್ವಾಧೀನಪಡಿಸಿಕೊಂಡಿದ್ದ 868 ಎಕರೆ ಜಮೀನಿನಲ್ಲಿ 852 ಎಕರೆಯನ್ನು ಕೈ ಬಿಟ್ಟಿದ್ದೀರಿ. ಕೋರ್ಟ್ ಆದೇಶಕ್ಕೆ ವಿರುದ್ಧವಾಗಿ ರೀಡೂ ನೇಮ್ ಅಲ್ಲಿ ಡಿನೋಟಿಫಿಕೇಷನ್ ಮಾಡಿದ್ದೀರಿ. ಈ ಬಗ್ಗೆ ಆಯೋಗದ ವರದಿಯಲ್ಲಿ ಹೇಳಲಾಗಿದೆ. ಎಕರೆಗೆ 10 ಕೋಟಿ ರೂಪಾಯಿ ಎಂದರೂ 8000 ಕೋಟಿ ರೂ. ಭ್ರಷ್ಟಾಚಾರ ಆಗಿದೆ ಎಂದು ಸಿಎಂ ಬೊಮ್ಮಾಯಿ ಕಾಂಗ್ರೆಸ್ ಸರ್ಕಾದ ವೇಳೆ ನಡೆದ ಹಗರಣದ ಬಗ್ಗೆ ಸದನದಲ್ಲಿ ಎಳೆ ಎಳೆಯಾಗಿ ಹೇಳಿದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸದನದಲ್ಲಿ ಇಲ್ಲದೇ ಇರುವಾಗ ಈ ರೀತಿ ಆರೋಪ ಮಾಡಬೇಡಿ. 4 ವರ್ಷದಿಂದ ಏನು ಮಾಡುತ್ತಿದ್ದೀರಿ. ಇದು ಸತ್ಯವಾದರೇ ಎಲ್ಲ ಸದಸ್ಯರಿಗೆ ಒಂದೊಂದು ಪ್ರತಿ ನೀಡಿ. ಅದು ಬಿಟ್ಟು ಕೇವಲ ರಾಜಕೀಯ ಭಾಷಣ ಮಾಡಬೇಡಿ. ಅಕ್ರಮ ನಡೆದಿದ್ದರೇ ಸಿಬಿಐಗೆ ವಹಿಸಿ ಎಂದು ಕಾಂಗ್ರೆಸ್ನ ಕೆ.ಜೆ. ಜಾರ್ಜ್ ಅವರು ಸಿಎಂಗೆ ಸದನದಲ್ಲಿ ಎದುರುತ್ತರ ಕೊಟ್ಟರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸಿದ್ದರಾಮಯ್ಯ CM ಆಗಿದ್ದಾಗ ಅರ್ಕಾವತಿ ಡಿನೋಟಿಫಿಕೇಷನ್ ಹಗರಣ
ವಿಧಾನಸಭೆ ಚುನಾವಣೆ ಹೊತ್ತಲ್ಲಿ ಸಿದ್ದು ವಿರುದ್ಧ CM ಗಂಭೀರ ಆರೋಪ
ಆರೋಪಿಗಳನ್ನು ಜೈಲಿಗೆ ಕಳುಹಿಸುತ್ತೇವೆ ಎಂದಿರುವ ಬಸವರಾಜ್ ಬೊಮ್ಮಾಯಿ
ವಿಧಾನಸಭೆ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ 8 ಸಾವಿರ ಕೋಟಿ ರೂಪಾಯಿಗಳ ಬೃಹತ್ ಹಗರಣ ನಡೆದಿದೆ ಎಂದು ವಿಧಾನಸಭಾ ಕಲಾಪದಲ್ಲಿ ಸಿಎಂ ಬೊಮ್ಮಾಯಿ ಆರೋಪಿಸಿದ್ದಾರೆ. ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತು ನ್ಯಾ.ಕೆಂಪಣ್ಣ ಆಯೋಗ ಸಲ್ಲಿಸಿದ್ದ ವರದಿಯನ್ನ ಆಧಾರಿಸಿ ಸಿಎಂ ಬೊಮ್ಮಾಯಿ ಈ ವಿಷಯವನ್ನು ಪ್ರಸ್ತಾಪಿಸಿದರು.
ಜಮೀನು ಮಾಲೀಕರ ಹಿತಾಸಕ್ತಿಗಾಗಿ 800ಕ್ಕೂ ಹೆಚ್ಚು ಎಕರೆ ಜಮೀನು ಅನ್ನು ರೀಡೂ ಹೆಸರಲ್ಲಿ ಡಿನೋಟಿಫಿಕೇಷನ್ ಆಗಿರುವುದು ನಿಜ. ಇದು ವರದಿಯಲ್ಲಿ ಸ್ಪಷ್ಟವಾಗಿದೆ. ಈ ವರದಿ ಬಗ್ಗೆ ಯಾವ ಕ್ರಮ ಕೈಗೊಳ್ಳದೇ ಸಿದ್ದರಾಮಯ್ಯ ತಮ್ಮ ಅವಧಿಯ ಹಗರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿ ತಪ್ಪಿತಸ್ಥರನ್ನ ಜೈಲಿಗೆ ಕಳುಹಿಸುತ್ತೇವೆ ಎಂದು ಸಿಎಂ ಹೇಳಿದರು.
ಸುಳ್ಳು ಭ್ರಷ್ಟಾಚಾರ ಆರೋಪ ಮಾಡಬೇಡಿ. ಕಾಂಗ್ರೆಸ್ನವರು ಗುತ್ತಿಗೆದಾರ ಕೆಂಪಣ್ಣರನ್ನ ಕರೆ ತಂದರೆ ನಮಗೆ ನ್ಯಾ.ಕೆಂಪಣ್ಣ ಬರುತ್ತಾರೆ. ಅರ್ಕಾವತಿ ಬಡಾವಣೆಗಾಗಿ ಸ್ವಾಧೀನಪಡಿಸಿಕೊಂಡಿದ್ದ 868 ಎಕರೆ ಜಮೀನಿನಲ್ಲಿ 852 ಎಕರೆಯನ್ನು ಕೈ ಬಿಟ್ಟಿದ್ದೀರಿ. ಕೋರ್ಟ್ ಆದೇಶಕ್ಕೆ ವಿರುದ್ಧವಾಗಿ ರೀಡೂ ನೇಮ್ ಅಲ್ಲಿ ಡಿನೋಟಿಫಿಕೇಷನ್ ಮಾಡಿದ್ದೀರಿ. ಈ ಬಗ್ಗೆ ಆಯೋಗದ ವರದಿಯಲ್ಲಿ ಹೇಳಲಾಗಿದೆ. ಎಕರೆಗೆ 10 ಕೋಟಿ ರೂಪಾಯಿ ಎಂದರೂ 8000 ಕೋಟಿ ರೂ. ಭ್ರಷ್ಟಾಚಾರ ಆಗಿದೆ ಎಂದು ಸಿಎಂ ಬೊಮ್ಮಾಯಿ ಕಾಂಗ್ರೆಸ್ ಸರ್ಕಾದ ವೇಳೆ ನಡೆದ ಹಗರಣದ ಬಗ್ಗೆ ಸದನದಲ್ಲಿ ಎಳೆ ಎಳೆಯಾಗಿ ಹೇಳಿದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸದನದಲ್ಲಿ ಇಲ್ಲದೇ ಇರುವಾಗ ಈ ರೀತಿ ಆರೋಪ ಮಾಡಬೇಡಿ. 4 ವರ್ಷದಿಂದ ಏನು ಮಾಡುತ್ತಿದ್ದೀರಿ. ಇದು ಸತ್ಯವಾದರೇ ಎಲ್ಲ ಸದಸ್ಯರಿಗೆ ಒಂದೊಂದು ಪ್ರತಿ ನೀಡಿ. ಅದು ಬಿಟ್ಟು ಕೇವಲ ರಾಜಕೀಯ ಭಾಷಣ ಮಾಡಬೇಡಿ. ಅಕ್ರಮ ನಡೆದಿದ್ದರೇ ಸಿಬಿಐಗೆ ವಹಿಸಿ ಎಂದು ಕಾಂಗ್ರೆಸ್ನ ಕೆ.ಜೆ. ಜಾರ್ಜ್ ಅವರು ಸಿಎಂಗೆ ಸದನದಲ್ಲಿ ಎದುರುತ್ತರ ಕೊಟ್ಟರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ