ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ 'ಗೃಹಲಕ್ಷ್ಮಿ'
ಸದ್ಯದಲ್ಲೇ 'ಗೃಹಲಕ್ಷ್ಮಿ' ಯೋಜನೆಗೆ ಅರ್ಜಿ ಸಲ್ಲಿಕೆ ಶುರು
'ಗೃಹಲಕ್ಷ್ಮಿ' ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಏನಂದ್ರು..?
ಬೆಂಗಳೂರು: ವಿಧಾನಸೌಧದಲ್ಲಿ ಇಂದು ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ಈ ಸಭೆ ಬಳಿಕ ಟ್ವೀಟ್ ಮಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ‘ಗೃಹಲಕ್ಷ್ಮಿ’ ಯೋಜನೆ ಬಗ್ಗೆ ಮಹತ್ವದ ಅಪ್ಡೇಟ್ ಕೊಟ್ಟಿದ್ದಾರೆ.
ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಗೃಹಲಕ್ಷ್ಮಿ’ ಯೋಜನೆಗೆ ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪುರೇಷೆ ಸಿಗಲಿದ್ದು, ಈ ಯೋಜನೆಗೆ ಪ್ರತ್ಯೇಕ ಆ್ಯಪ್ ತಯಾರಾಗಿದೆ. ಈ ಕುರಿತು ಸಿಎಂ ಜೊತೆ ಚರ್ಚೆ ನಡೆಸಲಾಗುವುದು. ಅಧಿಕಾರಿಗಳು ಮತ್ತು ಸಚಿವರ ಜೊತೆ ಸುದೀರ್ಘ ಸಭೆ ನಡೆಸಲಾಗಿದೆ ಎಂದರು ಲಕ್ಷ್ಮೀ ಹೆಬ್ಬಾಳ್ಕರ್.
ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ @DKShivakumar ರವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಭಾಗಿಯಾದೆ.
ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ 'ಗೃಹಲಕ್ಷ್ಮಿ' ಯೋಜನೆಗೆ ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪುರೇಷೆ ಸಿಗಲಿದ್ದು, ಈ… pic.twitter.com/f39dj3WQQY
— Laxmi Hebbalkar (@laxmi_hebbalkar) June 23, 2023
ಯಾವಾಗ ಅರ್ಜಿ ಸ್ವೀಕಾರ ಮಾಡಬೇಕೆನ್ನುವುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅರ್ಜಿ ಸ್ವೀಕಾರ ಮಾಡಲಿದ್ದೇವೆ. ಆಗಸ್ಟ್ ತಿಂಗಳಲ್ಲಿ ಈ ಯೋಜನೆ ಜಾರಿಗೆ ಬರಲಿದ್ದು, ಸೇವಾಸಿಂಧು ಸರ್ವರ್ ಗೆ ಓವರ್ ಲೋಡ್ ಆಗುತ್ತಿದೆ. ಅದು ಅಪ್ಡೇಟ್ ಆದ್ರೂ ಕೂಡ ಸಮಸ್ಯೆ ಉಂಟಾಗುತ್ತಿದೆ. ಇದಕ್ಕೆಲ್ಲಾ ಹೊಸ ಆ್ಯಪ್ ನಲ್ಲಿ ಪರಿಹಾರ ಸಿಗಲಿದ್ದು. ಸಂಪುಟ ಸಭೆಯಲ್ಲಿ ಈ ಆ್ಯಪ್ ನ್ನು ಮುಖ್ಯಮಂತ್ರಿಗಳಿಗೆ ತೋರಿಸಿ ಅಂತಿಮ ದಿನಾಂಕ ಘೋಷಣೆ ಮಾಡಲಿದ್ದೇವೆ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ 'ಗೃಹಲಕ್ಷ್ಮಿ'
ಸದ್ಯದಲ್ಲೇ 'ಗೃಹಲಕ್ಷ್ಮಿ' ಯೋಜನೆಗೆ ಅರ್ಜಿ ಸಲ್ಲಿಕೆ ಶುರು
'ಗೃಹಲಕ್ಷ್ಮಿ' ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಏನಂದ್ರು..?
ಬೆಂಗಳೂರು: ವಿಧಾನಸೌಧದಲ್ಲಿ ಇಂದು ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ಈ ಸಭೆ ಬಳಿಕ ಟ್ವೀಟ್ ಮಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ‘ಗೃಹಲಕ್ಷ್ಮಿ’ ಯೋಜನೆ ಬಗ್ಗೆ ಮಹತ್ವದ ಅಪ್ಡೇಟ್ ಕೊಟ್ಟಿದ್ದಾರೆ.
ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಗೃಹಲಕ್ಷ್ಮಿ’ ಯೋಜನೆಗೆ ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪುರೇಷೆ ಸಿಗಲಿದ್ದು, ಈ ಯೋಜನೆಗೆ ಪ್ರತ್ಯೇಕ ಆ್ಯಪ್ ತಯಾರಾಗಿದೆ. ಈ ಕುರಿತು ಸಿಎಂ ಜೊತೆ ಚರ್ಚೆ ನಡೆಸಲಾಗುವುದು. ಅಧಿಕಾರಿಗಳು ಮತ್ತು ಸಚಿವರ ಜೊತೆ ಸುದೀರ್ಘ ಸಭೆ ನಡೆಸಲಾಗಿದೆ ಎಂದರು ಲಕ್ಷ್ಮೀ ಹೆಬ್ಬಾಳ್ಕರ್.
ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ @DKShivakumar ರವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಭಾಗಿಯಾದೆ.
ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ 'ಗೃಹಲಕ್ಷ್ಮಿ' ಯೋಜನೆಗೆ ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪುರೇಷೆ ಸಿಗಲಿದ್ದು, ಈ… pic.twitter.com/f39dj3WQQY
— Laxmi Hebbalkar (@laxmi_hebbalkar) June 23, 2023
ಯಾವಾಗ ಅರ್ಜಿ ಸ್ವೀಕಾರ ಮಾಡಬೇಕೆನ್ನುವುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅರ್ಜಿ ಸ್ವೀಕಾರ ಮಾಡಲಿದ್ದೇವೆ. ಆಗಸ್ಟ್ ತಿಂಗಳಲ್ಲಿ ಈ ಯೋಜನೆ ಜಾರಿಗೆ ಬರಲಿದ್ದು, ಸೇವಾಸಿಂಧು ಸರ್ವರ್ ಗೆ ಓವರ್ ಲೋಡ್ ಆಗುತ್ತಿದೆ. ಅದು ಅಪ್ಡೇಟ್ ಆದ್ರೂ ಕೂಡ ಸಮಸ್ಯೆ ಉಂಟಾಗುತ್ತಿದೆ. ಇದಕ್ಕೆಲ್ಲಾ ಹೊಸ ಆ್ಯಪ್ ನಲ್ಲಿ ಪರಿಹಾರ ಸಿಗಲಿದ್ದು. ಸಂಪುಟ ಸಭೆಯಲ್ಲಿ ಈ ಆ್ಯಪ್ ನ್ನು ಮುಖ್ಯಮಂತ್ರಿಗಳಿಗೆ ತೋರಿಸಿ ಅಂತಿಮ ದಿನಾಂಕ ಘೋಷಣೆ ಮಾಡಲಿದ್ದೇವೆ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ