/newsfirstlive-kannada/media/post_attachments/wp-content/uploads/2023/08/rashi-bhavishya-25.jpg)
ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.
ಶ್ರೀ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ, ದಶಮಿ ತಿಥಿ, ಪುಷ್ಯಾ ನಕ್ಷತ್ರ, ರಾಹುಕಾಲ ಸೋಮವಾರ ಬೆಳಗ್ಗೆ 7.30 ರಿಂದ 9.00 ರವರೆಗೆ
ಮೇಷ ರಾಶಿ
- ಮಕ್ಕಳ ಕೆಟ್ಟ ಅಭ್ಯಾಸಗಳಿಂದ ಅವಮಾನ, ಮನಸ್ಸಿಗೆ ನೋವು ಉಂಟಾಗಬಹುದು
- ಆಸ್ತಿಯ ವಿಚಾರವಾಗಿ ವಾದ-ವಿವಾದಗಳು ಏರ್ಪಡಬಹುದು
- ಹೊಸ ಹೊಸ ಬದಲಾವಣೆಯಾಗುವ ಸೂಚನೆಗಳು ಕಾಣಬಹುದು
- ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಗೌರವ, ಪುರಸ್ಕಾರ ದೊರೆಯುವ ದಿನ
- ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ದುರ್ಗಾ ಹೋಮ ಮಾಡಿಸಿ
ವೃಷಭ
- ಈ ದಿನ ನಿಮಗೆ ಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆಯಿದೆ
- ನಿಮ್ಮ ಬುಧ್ಧಿವಂತಿಕೆಯಿಂದ ಎಲ್ಲ ಸಮಸ್ಯೆಗಳನ್ನು ನಿಭಾಯಿಸಿ
- ಹಣದ ವಿಚಾರವಾಗಿ ಅಥವಾ ದೈಹಿಕ, ಮಾನಸಿಕ ತೊಂದರೆ ಸಾಧ್ಯತೆಯಿದೆ
- ಅಗತ್ಯವಿದ್ದಾಗ ಹಿರಿಯರ ಸಹಾಯ, ಸಲಹೆ ಪಡೆದುಕೊಂಡರೆ ಒಳ್ಳೆಯದು
- ನಿಮ್ಮ ಮನೆಯಲ್ಲಿ ಅಥವಾ ಕೆಲಸದ ಸ್ಥಳದಲ್ಲಿ ವಸ್ತುಗಳು ಕಳುವಾಗಬಹುದು ಜಾಗ್ರತೆ ವಹಿಸಿ
- ನಿಮ್ಮಲ್ಲಿರುವ ಬೇರೆಯವರ ವಸ್ತುಗಳು ಕಳೆದು ಹೋಗುವ ಸಾಧ್ಯತೆ ಇದೆ
- ರಸ್ತೆಯಲ್ಲಿರುವ ಮರ ಅಥವಾ ಮರದ ಕೊಂಬೆಯಿಂದ ತೊಂದರೆ ಸಾಧ್ಯತೆ, ಎಚ್ಚರಿಕೆ ಇರಲಿ
- ಹಯಗ್ರೀವನನ್ನು ಪ್ರಾರ್ಥನೆ ಮಾಡಿ
- ಜ್ಞಾನಾನಂದಮಯಂ ದೇವಂ ನಿರ್ಮಲಸ್ಫಟಿಕಾಕೃತಿಮ್ l
- ಆಧಾರಂ ಸರ್ವ ವಿದ್ಯಾನಾಂ ಹಯಗ್ರೀವಮುಪಾಸ್ಮಹೇ ll
ಮಿಥುನ
- ಇಂದು ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಚ್ಚರಿಕೆ
- ವಿವಾಹ ವಿಚಾರದಲ್ಲಿ ಉದ್ವಿಗ್ನ ಪರಿಸ್ಥಿತಿ ಕಾಡಬಹುದು
- ನಿಮ್ಮ ಮನಸ್ಸು ಶುದ್ಧವಾಗಿರಲಿ, ತಾಳ್ಮೆ ಇರಲಿ ಶುಭವಾಗುತ್ತದೆ
- ನಿಮ್ಮ ಕೆಲಸಕ್ಕೆ ಮನೆಯವರ ಸಹಾಯ, ಸಹಕಾರ ದೊರೆಯದೆ ಇರಬಹುದು
- ಪ್ರತ್ಯಂಗಿರ ದೇವಿಯನ್ನು ಪ್ರಾರ್ಥನೆ ಮಾಡಿ
ಕಟಕ
- ಮಾಂತ್ರಿಕವಾದ ದೋಷ ನಿಮ್ಮನ್ನು ಮತ್ತು ಕುಟುಂಬವನ್ನು ಕಾಡಬಹುದು
- ಅನಗತ್ಯ ಹಣ ಖರ್ಚು ಮಾಡಿ ಸಮಸ್ಯೆ ಬಗೆಹರಿಯದೆ ಒದ್ದಾಡಬೇಕಾಗಬಹುದು
- ಇಲ್ಲಸಲ್ಲದ ವಿಚಾರಗಳೇ ಹೆಚ್ಚಾಗಿ ಚರ್ಚೆ ಮಾಡಬಹುದು
- ಮಾನಸಿಕ ನೆಮ್ಮದಿಗಾಗಿ ಗುರು-ಹಿರಿಯರ ಸಲಹೆ ಮುಖ್ಯವಾಗುತ್ತದೆ
- ಉಚ್ಚಾಟನಾ ಸುದರ್ಶನ ಹೋಮ ಮಾಡಿಸಿ
ಸಿಂಹ
- ದ್ರವ ಪದಾರ್ಥಗಳನ್ನು ವ್ಯಾಪಾರ ಮಾಡುವ ವ್ಯಕ್ತಿಗಳಿಗೆ ವಾಹನ ಅಪಘಾತವಾಗುವ ಸಾಧ್ಯತೆಯಿದೆ ಎಚ್ಚರಿಕೆ ಇರಲಿ
- ಅಪಘಾತದಿಂದ ಹೆಚ್ಚು ಹಣ ಖರ್ಚಾಗಬಹುದು, ಜಾಗ್ರತೆ ಇರಲಿ
- ಇಂದು ಅನಿರೀಕ್ಷಿತ ಹಣ ಕೂಡ ನಿಮ್ಮ ಕೈ ಸೇರಬಹುದು
- ಕಪಾಲಿನೀ ದೇವಿಯನ್ನು ಆರಾಧನೆ ಮಾಡಿ
ಕನ್ಯಾ
- ನಿಮ್ಮ ನಿಮ್ಮ ಕ್ಷೇತ್ರದಲ್ಲಿ ವಿಶೇಷ ಗೌರವ ಸಿಗುವ ದಿನ
- ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ವ್ಯಕ್ತಿಗಳಿಗೆ ಗೌರವ, ಸನ್ಮಾನ ಸಿಗುತ್ತವೆ
- ಭೂ ವ್ಯಾಪಾರಿಗಳಿಗೆ ಉತ್ತಮವಾದ ದಿನ
- ಇಂದು ಉತ್ತಮವಾದ ಕಾರ್ಯಗಳು ಆರಂಭವಾಗಬಹುದು
- ಊಟವೂ ಸಕಾಲಕ್ಕೆ ದೊರೆಯದೇ ಕೋಪ ಹೆಚ್ಚಾಗುವ ಸಾಧ್ಯತೆಯಿರುತ್ತದೆ
- ನಿಮ್ಮ ಗೆಳೆಯ, ಗೆಳತಿಯರ ವಿವಾಹದ ಶುಭ ಸುದ್ದಿ ಸಿಗಬಹುದು
- ಅನ್ನಪೂರ್ಣೇಶ್ವರಿಯನ್ನು ಆರಾಧನೆ ಮಾಡಿ
ತುಲಾ
- ಇಂದು ನಿಮ್ಮ ಆತ್ಮವಿಶ್ವಾಸದ ಜೊತೆಗೆ ನಿಮ್ಮ ಪ್ರತಿಭೆಗೆ ತಕ್ಕ ಫಲವು ದೊರಕಬಹುದು
- ನಿಮ್ಮ ಪ್ರತಿಭೆಯನ್ನ ವೈಯಕ್ತಿಕ ಲಾಭಕ್ಕಿಂತ ಸಮಾಜ ಸೇವೆಗೆ ಉಪಯೋಗಿಸಿ
- ಸಮಾಜಕ್ಕೆ ಸರಿಯಾದ ಸಂದೇಶ ನೀಡುತ್ತಾ ಇನ್ನೂ ಹೆಚ್ಚಿನ ಮನ್ನಣೆಯನ್ನು ಪಡೆಯಿರಿ
- ಮನೆಯ ಚಿಕ್ಕಮಕ್ಕಳ ಆರೋಗ್ಯದಲ್ಲಿ ಏರುಪೇರು ಸಾಧ್ಯತೆ ಗಮನವಿರಲಿ
- ರಾಜಕೀಯ ವ್ಯಕ್ತಿಗಳ ಹಾಗೂ ಗಣ್ಯರ ಬೆಂಬಲ ಹೆಚ್ಚಾಗಬಹುದು
ವೃಶ್ಚಿಕ
- ದೂರದೂರಿಗೆ ಪ್ರಯಾಣ ಮಾಡಬಹುದಾದ ದಿವಸ
- ಪ್ರೇಯಸಿಯೊಂದಿಗೆ ನಿಮ್ಮ ಪ್ರಯಾಣ ಆನಂದವಾಗಿರುತ್ತದೆ
- ಸ್ತ್ರೀಯರು ಷೇರು ಮಾರುಕಟ್ಟೆಯಲ್ಲಿ ಹಣವನ್ನು ತೊಡಗಿಸಿದರೆ ಲಾಭ ಪಡೆಯಬಹುದು
- ವ್ಯಾಪಾರ, ವ್ಯವಹಾರದಲ್ಲಿ ಪ್ರಗತಿ ಕಾಣುವ ದಿನ
- ಬರಬೇಕಾದ ಬಾಕಿ ಹಣ ನಿಮ್ಮ ಕೈಸೇರಬಹುದು
- ಸಂಪತ್ ಲಕ್ಷ್ಮೀಯನ್ನು ಪ್ರಾರ್ಥನೆ ಮಾಡಿ
ಧನಸ್ಸು
- ವ್ಯಾಪಾರ-ವ್ಯವಹಾರಗಳಲ್ಲಿ ತಪ್ಪು ಸಂಭವಿಸಬಹುದು
- ಸ್ನೇಹಿತರು ನಿಮ್ಮನ್ನು ವ್ಯವಹಾರದಿಂದ ಹೊರಗಿಟ್ಟು ರಹಸ್ಯವಾಗಿ ವ್ಯವಹರಿಸುತ್ತಾರೆ
- ನಿಮ್ಮ ಹಾಗೂ ನಿಮ್ಮ ಸ್ನೇಹಿತರ ಮಧ್ಯೆ ಅಸಮಾಧಾನ ಏರ್ಪಟ್ಟು ಕಲಹವಾಗಬಹುದು
- ನಿಮ್ಮ ಸ್ನೇಹಿತರ ಜೊತೆ ವ್ಯವಹಾರವನ್ನ ರದ್ದು ಮಾಡಬಹುದು
- ವ್ಯಾಪಾರ, ವ್ಯವಹಾರದಲ್ಲಿ ಪಾಲುದಾರಿಕೆಯಿಂದ ಹೊರ ಬರುವ ಪರಿಸ್ಥಿತಿ ನಿರ್ಮಾಣವಾಗಬಹುದು
- ದುರ್ಗಾ ದೇವಿಯನ್ನು ಪ್ರಾರ್ಥನೆ ಮಾಡಿ
ಮಕರ
- ನಿಮಗೆಲ್ಲಾ ಇದ್ರೂ ಇನ್ನು ಏನೇನೋ ಮಾಡಬೇಕೆಂದು ಬೇಡವಾದುದ್ದನ್ನು ಗಂಟು ಹಾಕಿಕೊಳ್ಳುತ್ತೀರಿ
- ನಿಮ್ಮ ಕಾರ್ಯಕ್ಷೇತ್ರದಲ್ಲಿ ನಿಮ್ಮ ಚಿಂತನೆಗಳು,ಯೋಜನೆಗಳು ಯಾರಿಗೂ ಸರಿಯಾಗಿ ಅರ್ಥವಾಗದೇ ಹಿನ್ನಡೆಯಾಗಬಹುದು
- ನಿಮ್ಮಿಂದ ಹಲವರು ಉಪಕಾರ ಪಡೆದು ನಿಮ್ಮ ಸ್ವಭಾವಕ್ಕೆ ಬೇಸತ್ತು ದೂರವಾಗುತ್ತಾರೆ
- ದೇವಿಯನ್ನು ದ್ರವ್ಯದಿಂದ ಆರಾಧಿಸಿ
ಕುಂಭ
- ವಿವಾಹದ ದೃಷ್ಟಿಯಿಂದ ನಿಮ್ಮ ಹಳೆಯ ಬಂಧುಗಳು ಹೊಸ ಸಂಬಂಧ ಬೆಳೆಸುವ ಅವಕಾಶವಿದೆ
- ನಿಮ್ಮ ಮಾತು ಇಂದು ಬಹಳ ಮುಖ್ಯವಾಗಿರುತ್ತದೆ
- ನಿಮ್ಮ ಹಣದ ಸ್ಥಿತಿ ಸುಧಾರಿಸುತ್ತದೆ
- ಏಕರಾಶಿ ಏಕ ನಕ್ಷತ್ರದಲ್ಲಿರುವ ದಂಪತಿಗಳು ಇವತ್ತಿನ ಮಾತುಕತೆಗೆ, ವ್ಯವಹಾರಕ್ಕೆ ಕೇಂದ್ರ ಬಿಂದುವಾಗ್ತೀರಿ
- ಸ್ವಯಂವರ ಪಾರ್ವತಿ ಆರಾಧನೆ ಮಾಡಿ
ಮೀನ
- ಚರ್ಮರೋಗಕ್ಕೆ ಸಂಬಂಧಿಸಿದ ವ್ಯಕ್ತಿಗಳು ಜಾಗರೂಕರಾಗಿರಬೇಕು
- ನಿಮ್ಮ ಚರ್ಮರೋಗ ಹೆಚ್ಚಾಗುವ ಸೂಚನೆಗಳಿವೆ
- ವೈದ್ಯರು ಹೇಳಿದ ಪಥ್ಯಗಳನ್ನು ಶಿಸ್ತಿನಿಂದ ಪಾಲಿಸಬೇಕು
- ಸರ್ಕಾರಿ ಉದ್ಯೋಗಿಗಳಿಗೆ ಶುಭದಿನ ಆನಂದವಾಗಿರುತ್ತೀರಿ
- ಕುಟುಂಬದಲ್ಲಿ, ವ್ಯವಹಾರದಲ್ಲಿ, ವಿದ್ಯಾರ್ಥಿಗಳ ಭವಿಷ್ಯದಲ್ಲಿ ಅಭಿವೃದ್ಧಿ ಉಂಟಾಗುತ್ತದೆ
- ಚರ್ಮರೋಗಿಗಳು ಅಮೃತ ಬಳ್ಳಿ ಎಲೆಗಳನ್ನು ಸೇವಿಸಿ
- ಮಹಾವಿಷ್ಣುವನ್ನು ಪ್ರಾರ್ಥನೆ ಮಾಡಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ