ನಿಮ್ಮ ಹಣದ ಸ್ಥಿತಿ ಸುಧಾರಿಸುತ್ತದೆ, ವ್ಯಾಪಾರ, ವ್ಯವಹಾರದಲ್ಲಿ ಪ್ರಗತಿ ಕಾಣುವ ದಿನ; ಇಲ್ಲಿದೆ ಇಂದಿನ ಭವಿಷ್ಯ!

author-image
admin
Updated On
ಪ್ರೇಮಿಗಳಿಗೆ ಶುಭದಿನ; ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡ; ಇಲ್ಲಿದೆ ಇಂದಿನ ಭವಿಷ್ಯ
Advertisment
  • ಪ್ರೇಯಸಿಯೊಂದಿಗೆ ನಿಮ್ಮ ಪ್ರಯಾಣ ಆನಂದವಾಗಿರುತ್ತದೆ
  • ಅನಗತ್ಯ ಹಣ ಖರ್ಚು ಮಾಡಿ ಸಮಸ್ಯೆ ಬಗೆಹರಿಯದೆ ಒದ್ದಾಡುತ್ತೀರಿ
  • ಇಂದು ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಚ್ಚರಿಕೆ

ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ. 

ಶ್ರೀ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ, ದಶಮಿ ತಿಥಿ, ಪುಷ್ಯಾ ನಕ್ಷತ್ರ, ರಾಹುಕಾಲ ಸೋಮವಾರ ಬೆಳಗ್ಗೆ 7.30 ರಿಂದ 9.00 ರವರೆಗೆ

ಮೇಷ ರಾಶಿ

publive-image

  • ಮಕ್ಕಳ ಕೆಟ್ಟ ಅಭ್ಯಾಸಗಳಿಂದ ಅವಮಾನ, ಮನಸ್ಸಿಗೆ ನೋವು ಉಂಟಾಗಬಹುದು
  • ಆಸ್ತಿಯ ವಿಚಾರವಾಗಿ ವಾದ-ವಿವಾದಗಳು ಏರ್ಪಡಬಹುದು
  • ಹೊಸ ಹೊಸ ಬದಲಾವಣೆಯಾಗುವ ಸೂಚನೆಗಳು ಕಾಣಬಹುದು
  • ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಗೌರವ, ಪುರಸ್ಕಾರ ದೊರೆಯುವ ದಿನ
  • ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ದುರ್ಗಾ ಹೋಮ ಮಾಡಿಸಿ

ವೃಷಭ

publive-image

  • ಈ ದಿನ ನಿಮಗೆ ಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆಯಿದೆ
  • ನಿಮ್ಮ ಬುಧ್ಧಿವಂತಿಕೆಯಿಂದ ಎಲ್ಲ ಸಮಸ್ಯೆಗಳನ್ನು ನಿಭಾಯಿಸಿ
  • ಹಣದ ವಿಚಾರವಾಗಿ ಅಥವಾ ದೈಹಿಕ, ಮಾನಸಿಕ ತೊಂದರೆ ಸಾಧ್ಯತೆಯಿದೆ
  • ಅಗತ್ಯವಿದ್ದಾಗ ಹಿರಿಯರ ಸಹಾಯ, ಸಲಹೆ ಪಡೆದುಕೊಂಡರೆ ಒಳ್ಳೆಯದು
  • ನಿಮ್ಮ ಮನೆಯಲ್ಲಿ ಅಥವಾ ಕೆಲಸದ ಸ್ಥಳದಲ್ಲಿ ವಸ್ತುಗಳು ಕಳುವಾಗಬಹುದು ಜಾಗ್ರತೆ ವಹಿಸಿ
  • ನಿಮ್ಮಲ್ಲಿರುವ ಬೇರೆಯವರ ವಸ್ತುಗಳು ಕಳೆದು ಹೋಗುವ ಸಾಧ್ಯತೆ ಇದೆ
  • ರಸ್ತೆಯಲ್ಲಿರುವ ಮರ ಅಥವಾ ಮರದ ಕೊಂಬೆಯಿಂದ ತೊಂದರೆ ಸಾಧ್ಯತೆ, ಎಚ್ಚರಿಕೆ ಇರಲಿ
  • ಹಯಗ್ರೀವನನ್ನು ಪ್ರಾರ್ಥನೆ ಮಾಡಿ
  • ಜ್ಞಾನಾನಂದಮಯಂ ದೇವಂ ನಿರ್ಮಲಸ್ಫಟಿಕಾಕೃತಿಮ್ l
  • ಆಧಾರಂ ಸರ್ವ ವಿದ್ಯಾನಾಂ ಹಯಗ್ರೀವಮುಪಾಸ್ಮಹೇ ll

ಮಿಥುನ

publive-image

  • ಇಂದು ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಚ್ಚರಿಕೆ
  • ವಿವಾಹ ವಿಚಾರದಲ್ಲಿ ಉದ್ವಿಗ್ನ ಪರಿಸ್ಥಿತಿ ಕಾಡಬಹುದು
  • ನಿಮ್ಮ ಮನಸ್ಸು ಶುದ್ಧವಾಗಿರಲಿ, ತಾಳ್ಮೆ ಇರಲಿ ಶುಭವಾಗುತ್ತದೆ
  • ನಿಮ್ಮ ಕೆಲಸಕ್ಕೆ ಮನೆಯವರ ಸಹಾಯ, ಸಹಕಾರ ದೊರೆಯದೆ ಇರಬಹುದು
  • ಪ್ರತ್ಯಂಗಿರ ದೇವಿಯನ್ನು ಪ್ರಾರ್ಥನೆ ಮಾಡಿ

ಕಟಕ

publive-image

  • ಮಾಂತ್ರಿಕವಾದ ದೋಷ ನಿಮ್ಮನ್ನು ಮತ್ತು ಕುಟುಂಬವನ್ನು ಕಾಡಬಹುದು
  • ಅನಗತ್ಯ ಹಣ ಖರ್ಚು ಮಾಡಿ ಸಮಸ್ಯೆ ಬಗೆಹರಿಯದೆ ಒದ್ದಾಡಬೇಕಾಗಬಹುದು
  • ಇಲ್ಲಸಲ್ಲದ ವಿಚಾರಗಳೇ ಹೆಚ್ಚಾಗಿ ಚರ್ಚೆ ಮಾಡಬಹುದು
  • ಮಾನಸಿಕ ನೆಮ್ಮದಿಗಾಗಿ ಗುರು-ಹಿರಿಯರ ಸಲಹೆ ಮುಖ್ಯವಾಗುತ್ತದೆ
  • ಉಚ್ಚಾಟನಾ ಸುದರ್ಶನ ಹೋಮ ಮಾಡಿಸಿ

ಸಿಂಹ

publive-image

  • ದ್ರವ ಪದಾರ್ಥಗಳನ್ನು ವ್ಯಾಪಾರ ಮಾಡುವ ವ್ಯಕ್ತಿಗಳಿಗೆ ವಾಹನ ಅಪಘಾತವಾಗುವ ಸಾಧ್ಯತೆಯಿದೆ ಎಚ್ಚರಿಕೆ ಇರಲಿ
  • ಅಪಘಾತದಿಂದ ಹೆಚ್ಚು ಹಣ ಖರ್ಚಾಗಬಹುದು, ಜಾಗ್ರತೆ ಇರಲಿ
  • ಇಂದು ಅನಿರೀಕ್ಷಿತ ಹಣ ಕೂಡ ನಿಮ್ಮ ಕೈ ಸೇರಬಹುದು
  • ಕಪಾಲಿನೀ ದೇವಿಯನ್ನು ಆರಾಧನೆ ಮಾಡಿ

ಕನ್ಯಾ

publive-image

  • ನಿಮ್ಮ ನಿಮ್ಮ ಕ್ಷೇತ್ರದಲ್ಲಿ ವಿಶೇಷ ಗೌರವ ಸಿಗುವ ದಿನ
  • ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುವ ವ್ಯಕ್ತಿಗಳಿಗೆ ಗೌರವ, ಸನ್ಮಾನ ಸಿಗುತ್ತವೆ
  • ಭೂ ವ್ಯಾಪಾರಿಗಳಿಗೆ ಉತ್ತಮವಾದ ದಿನ
  • ಇಂದು ಉತ್ತಮವಾದ ಕಾರ್ಯಗಳು ಆರಂಭವಾಗಬಹುದು
  • ಊಟವೂ ಸಕಾಲಕ್ಕೆ ದೊರೆಯದೇ ಕೋಪ ಹೆಚ್ಚಾಗುವ ಸಾಧ್ಯತೆಯಿರುತ್ತದೆ
  • ನಿಮ್ಮ ಗೆಳೆಯ, ಗೆಳತಿಯರ ವಿವಾಹದ ಶುಭ ಸುದ್ದಿ ಸಿಗಬಹುದು
  • ಅನ್ನಪೂರ್ಣೇಶ್ವರಿಯನ್ನು ಆರಾಧನೆ ಮಾಡಿ

ತುಲಾ

publive-image

  • ಇಂದು ನಿಮ್ಮ ಆತ್ಮವಿಶ್ವಾಸದ ಜೊತೆಗೆ ನಿಮ್ಮ ಪ್ರತಿಭೆಗೆ ತಕ್ಕ ಫಲವು ದೊರಕಬಹುದು
  • ನಿಮ್ಮ ಪ್ರತಿಭೆಯನ್ನ ವೈಯಕ್ತಿಕ ಲಾಭಕ್ಕಿಂತ ಸಮಾಜ ಸೇವೆಗೆ ಉಪಯೋಗಿಸಿ
  • ಸಮಾಜಕ್ಕೆ ಸರಿಯಾದ ಸಂದೇಶ ನೀಡುತ್ತಾ ಇನ್ನೂ ಹೆಚ್ಚಿನ ಮನ್ನಣೆಯನ್ನು ಪಡೆಯಿರಿ
  • ಮನೆಯ ಚಿಕ್ಕಮಕ್ಕಳ ಆರೋಗ್ಯದಲ್ಲಿ ಏರುಪೇರು ಸಾಧ್ಯತೆ ಗಮನವಿರಲಿ
  • ರಾಜಕೀಯ ವ್ಯಕ್ತಿಗಳ ಹಾಗೂ ಗಣ್ಯರ ಬೆಂಬಲ ಹೆಚ್ಚಾಗಬಹುದು

ವೃಶ್ಚಿಕ

publive-image

  • ದೂರದೂರಿಗೆ ಪ್ರಯಾಣ ಮಾಡಬಹುದಾದ ದಿವಸ
  • ಪ್ರೇಯಸಿಯೊಂದಿಗೆ ನಿಮ್ಮ ಪ್ರಯಾಣ ಆನಂದವಾಗಿರುತ್ತದೆ
  • ಸ್ತ್ರೀಯರು ಷೇರು ಮಾರುಕಟ್ಟೆಯಲ್ಲಿ ಹಣವನ್ನು ತೊಡಗಿಸಿದರೆ ಲಾಭ ಪಡೆಯಬಹುದು
  • ವ್ಯಾಪಾರ, ವ್ಯವಹಾರದಲ್ಲಿ ಪ್ರಗತಿ ಕಾಣುವ ದಿನ
  • ಬರಬೇಕಾದ ಬಾಕಿ ಹಣ ನಿಮ್ಮ ಕೈಸೇರಬಹುದು
  • ಸಂಪತ್ ಲಕ್ಷ್ಮೀಯನ್ನು ಪ್ರಾರ್ಥನೆ ಮಾಡಿ

ಧನಸ್ಸು

publive-image

  • ವ್ಯಾಪಾರ-ವ್ಯವಹಾರಗಳಲ್ಲಿ ತಪ್ಪು ಸಂಭವಿಸಬಹುದು
  • ಸ್ನೇಹಿತರು ನಿಮ್ಮನ್ನು ವ್ಯವಹಾರದಿಂದ ಹೊರಗಿಟ್ಟು ರಹಸ್ಯವಾಗಿ ವ್ಯವಹರಿಸುತ್ತಾರೆ
  • ನಿಮ್ಮ ಹಾಗೂ ನಿಮ್ಮ ಸ್ನೇಹಿತರ ಮಧ್ಯೆ ಅಸಮಾಧಾನ ಏರ್ಪಟ್ಟು ಕಲಹವಾಗಬಹುದು
  • ನಿಮ್ಮ ಸ್ನೇಹಿತರ ಜೊತೆ ವ್ಯವಹಾರವನ್ನ ರದ್ದು ಮಾಡಬಹುದು
  • ವ್ಯಾಪಾರ, ವ್ಯವಹಾರದಲ್ಲಿ ಪಾಲುದಾರಿಕೆಯಿಂದ ಹೊರ ಬರುವ ಪರಿಸ್ಥಿತಿ ನಿರ್ಮಾಣವಾಗಬಹುದು
  • ದುರ್ಗಾ ದೇವಿಯನ್ನು ಪ್ರಾರ್ಥನೆ ಮಾಡಿ

ಮಕರ

publive-image

  • ನಿಮಗೆಲ್ಲಾ ಇದ್ರೂ ಇನ್ನು ಏನೇನೋ ಮಾಡಬೇಕೆಂದು ಬೇಡವಾದುದ್ದನ್ನು ಗಂಟು ಹಾಕಿಕೊಳ್ಳುತ್ತೀರಿ
  • ನಿಮ್ಮ ಕಾರ್ಯಕ್ಷೇತ್ರದಲ್ಲಿ ನಿಮ್ಮ ಚಿಂತನೆಗಳು,ಯೋಜನೆಗಳು ಯಾರಿಗೂ ಸರಿಯಾಗಿ ಅರ್ಥವಾಗದೇ ಹಿನ್ನಡೆಯಾಗಬಹುದು
  • ನಿಮ್ಮಿಂದ ಹಲವರು ಉಪಕಾರ ಪಡೆದು ನಿಮ್ಮ ಸ್ವಭಾವಕ್ಕೆ ಬೇಸತ್ತು ದೂರವಾಗುತ್ತಾರೆ
  • ದೇವಿಯನ್ನು ದ್ರವ್ಯದಿಂದ ಆರಾಧಿಸಿ

ಕುಂಭ

publive-image

  • ವಿವಾಹದ ದೃಷ್ಟಿಯಿಂದ ನಿಮ್ಮ ಹಳೆಯ ಬಂಧುಗಳು ಹೊಸ ಸಂಬಂಧ ಬೆಳೆಸುವ ಅವಕಾಶವಿದೆ
  • ನಿಮ್ಮ ಮಾತು ಇಂದು ಬಹಳ ಮುಖ್ಯವಾಗಿರುತ್ತದೆ
  • ನಿಮ್ಮ ಹಣದ ಸ್ಥಿತಿ ಸುಧಾರಿಸುತ್ತದೆ
  • ಏಕರಾಶಿ ಏಕ ನಕ್ಷತ್ರದಲ್ಲಿರುವ ದಂಪತಿಗಳು ಇವತ್ತಿನ ಮಾತುಕತೆಗೆ, ವ್ಯವಹಾರಕ್ಕೆ ಕೇಂದ್ರ ಬಿಂದುವಾಗ್ತೀರಿ
  • ಸ್ವಯಂವರ ಪಾರ್ವತಿ ಆರಾಧನೆ ಮಾಡಿ

ಮೀನ 

publive-image

  • ಚರ್ಮರೋಗಕ್ಕೆ ಸಂಬಂಧಿಸಿದ ವ್ಯಕ್ತಿಗಳು ಜಾಗರೂಕರಾಗಿರಬೇಕು
  • ನಿಮ್ಮ ಚರ್ಮರೋಗ ಹೆಚ್ಚಾಗುವ ಸೂಚನೆಗಳಿವೆ
  • ವೈದ್ಯರು ಹೇಳಿದ ಪಥ್ಯಗಳನ್ನು ಶಿಸ್ತಿನಿಂದ ಪಾಲಿಸಬೇಕು
  • ಸರ್ಕಾರಿ ಉದ್ಯೋಗಿಗಳಿಗೆ ಶುಭದಿನ ಆನಂದವಾಗಿರುತ್ತೀರಿ
  • ಕುಟುಂಬದಲ್ಲಿ, ವ್ಯವಹಾರದಲ್ಲಿ, ವಿದ್ಯಾರ್ಥಿಗಳ ಭವಿಷ್ಯದಲ್ಲಿ ಅಭಿವೃದ್ಧಿ ಉಂಟಾಗುತ್ತದೆ
  • ಚರ್ಮರೋಗಿಗಳು ಅಮೃತ ಬಳ್ಳಿ ಎಲೆಗಳನ್ನು ಸೇವಿಸಿ
  • ಮಹಾವಿಷ್ಣುವನ್ನು ಪ್ರಾರ್ಥನೆ ಮಾಡಿ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ            

Advertisment