/newsfirstlive-kannada/media/post_attachments/wp-content/uploads/2024/08/bulandshar-accident.jpg)
ಲಖನೌ: ಉತ್ತರಪ್ರದೇಶದ ಸಲೇನ್​ಪುರ ಅನ್ನೋ ಪ್ರದೇಶದಲ್ಲಿ ಭೀಕರ ಅಪಘಾತವಾಗಿ ಸ್ಥಳದಲ್ಲಿಯೇ 10 ಜನರು ಮೃತಪಟ್ಟು,27 ಜನರಿಗೆ ಗಂಭೀರ ಗಾಯಗಳಾಗಿವೆ. ಬಸ್​ ಹಾಗೂ ವ್ಯಾನ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಈ ಭೀಕರ ಅಪಘಾತ ಸಂಭವಿಸಿದೆ. ಹಲವಾರು ಕೂಲಿ ಕಾರ್ಮಿಕರು ರಕ್ಷಾಬಂಧನಕ್ಕಾಗಿ ರಾಖಿ ಕಟ್ಟಿಸಿಕೊಳ್ಳಲು ಅಂತ ತಮ್ಮ ಊರಿಗೆ ಹೊರಟಿದ್ದರು ಈ ವೇಳೆ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಬದೌನ್ ಮತ್ತು ಮೀರತ್ ಹೆದ್ದಾರಿಯಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದ್ದು. 10 ಜ ಸ್ಥಳದಲ್ಲಿಯೇ ಭೀಕರವಾಗಿ ಮೃತಪಟ್ಟಿದ್ದಾರೆ. 27 ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬುಲಂದಶಹರ್​ನ ಜಿಲ್ಲಾಧಿಕಾರಿ ಚಂದ್ರ ಪ್ರಕಾಶ್​ ಸಿಂಗ್​ ಹೇಳಿದ್ದಾರೆ.
ಇನ್ನು ಘಟನೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಸಿಎಂ ಯೋಗಿ ಆದಿತ್ಯನಾಥ್, ಗಾಯಾಳುಗಳಿಗೆ ಸರಿಯಾದ ವೈದ್ಯಕೀಯ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಲು ಜಿಲ್ಲಾಡಳಿತಕ್ಕೆ ಆದೇಶ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ