ನಿನ್ನೆ ಬೆಳಗ್ಗೆ 6 ಗಂಟೆಗೆ ದುರಂತ ಸಂಭವಿಸಿ ಸಾವು, ನೋವು
ಮಳೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಅಗತ್ಯ ಕೆಲಸವಿದ್ದರೆ ಮಾತ್ರ ಮನೆಯಿಂದ ಆಚೆ ಬರಲು ಸೂಚನೆ
ಮಿಜೋರಾಂನ ಐಜವಲ್ ಜಿಲ್ಲೆಯಲ್ಲಿ ಮಳೆಯಿಂದಾಗಿ ಭಾರೀ ದುರಂತ ಸಂಭವಿಸಿದ್ದು, 10 ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ನಾಪತ್ತೆ ಆಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಲ್ಲು ಕ್ವಾರಿ ಕುಸಿದು ಅನಾಹುತ ಸಂಭವಿಸಿದೆ. ನಿನ್ನೆ ಬೆಳಗ್ಗೆ 6 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ. Aizawl ಪಟ್ಟಣದ ಮೆಲ್ಟುಮ್ ಮತ್ತು ಹ್ಲುಮೆನ್ ಪ್ರದೇಶದ ಹೊರಹೊಲಯದಲ್ಲಿರುವ ಕ್ವಾರಿಯಲ್ಲಿ ದುರಂತ ನಡೆದಿದೆ.
ಇದನ್ನೂ ಓದಿ:ಈ 5 ಆಟಗಾರರು ಮಿಂಚಿದ್ರೆ ಟೀಂ ಇಂಡಿಯಾ T20 ವಿಶ್ವಕಪ್ ಚಾಂಪಿಯನ್ ಆಗೋದು ಪಕ್ಕಾ..!
ಕ್ವಾರೆಯ ಅವಶೇಷಗಳಡಿ ಕಾಣೆಯಾಗಿರುವ ಕಾರ್ಮಿಕರ ರಕ್ಷಣಾ ಕಾರ್ಯ ನಡೆಯುತ್ತಿದೆ. ರಕ್ಷಣಾ ಕೆಲಸಕ್ಕೆ ಮಳೆ ಅಡ್ಡಿಯಾಗಿದೆ. ಸೈಕ್ಲೋನ್ನಿಂದಾಗಿ ಮಿಜೋರಾಂನಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿಯೇ ಈ ದುರಂತ ಸಂಭವಿಸಿದೆ. ಜೊತೆಗೆ ಅಲ್ಲಿನ ರಾಷ್ಟ್ರೀಯ ಹೆದ್ದಾರಿ 6ರಲ್ಲಿ ಭೂ-ಕುಸಿತ ಸಂಭವಿಸಿದೆ. ಮಾತ್ರವಲ್ಲ, ಅನೇಕ ರಾಜ್ಯ ಹೆದ್ದಾರಿಗಳೂ ಬಂದ್ ಆಗಿವೆ. ಇದರಿಂದ ವಾಹನ ಸಂಚಾರವೂ ಅಸ್ತವ್ಯಸ್ತಗೊಂಡಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಕುಂಕುಮ ಕುತೂಹಲ..! ವಿಡಿಯೋ ಬಿಡುಗಡೆ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಬಗ್ಗೆ ಹೆಚ್ಚಿದ ಈ ಅನುಮಾನ..!
ಮಳೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ನೌಕರರಿಗೂ ರಜೆ ಘೋಷಿಸಲಾಗಿದೆ. ಅಗತ್ಯ ಕೆಲಸಗಳನ್ನು ಹೊರತುಪಡಿಸಿ ಮನೆಯಲ್ಲೇ ಇರುವಂತೆ ರಾಜ್ಯದ ಜನರಿಗೆ ಎಚ್ಚರಿಕೆ ನೀಡಲಾಗಿದೆ.
10 people have died as a stone quarry collapsed on the outskirts of #Aizawl following incessant #rains. Police personnel are engaged in rescue operations. #Mizoram #landslide #stonequarry pic.twitter.com/AXhhsAYyFC
— Priyathosh Agnihamsa (@priyathosh6447) May 28, 2024
ಇದನ್ನೂ ಓದಿ:ಸಮಸ್ಯೆ ಇದ್ದಾಗ ಮಾತ್ರ KL ರಾಹುಲ್ ನೆನಪಾಗ್ತಾರೆ.. ಈ ವಿಚಾರದಲ್ಲಿ ತಪ್ಪು ಮಾಡಿಬಿಡ್ತಾ ಬಿಸಿಸಿಐ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿನ್ನೆ ಬೆಳಗ್ಗೆ 6 ಗಂಟೆಗೆ ದುರಂತ ಸಂಭವಿಸಿ ಸಾವು, ನೋವು
ಮಳೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಅಗತ್ಯ ಕೆಲಸವಿದ್ದರೆ ಮಾತ್ರ ಮನೆಯಿಂದ ಆಚೆ ಬರಲು ಸೂಚನೆ
ಮಿಜೋರಾಂನ ಐಜವಲ್ ಜಿಲ್ಲೆಯಲ್ಲಿ ಮಳೆಯಿಂದಾಗಿ ಭಾರೀ ದುರಂತ ಸಂಭವಿಸಿದ್ದು, 10 ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ನಾಪತ್ತೆ ಆಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಲ್ಲು ಕ್ವಾರಿ ಕುಸಿದು ಅನಾಹುತ ಸಂಭವಿಸಿದೆ. ನಿನ್ನೆ ಬೆಳಗ್ಗೆ 6 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ. Aizawl ಪಟ್ಟಣದ ಮೆಲ್ಟುಮ್ ಮತ್ತು ಹ್ಲುಮೆನ್ ಪ್ರದೇಶದ ಹೊರಹೊಲಯದಲ್ಲಿರುವ ಕ್ವಾರಿಯಲ್ಲಿ ದುರಂತ ನಡೆದಿದೆ.
ಇದನ್ನೂ ಓದಿ:ಈ 5 ಆಟಗಾರರು ಮಿಂಚಿದ್ರೆ ಟೀಂ ಇಂಡಿಯಾ T20 ವಿಶ್ವಕಪ್ ಚಾಂಪಿಯನ್ ಆಗೋದು ಪಕ್ಕಾ..!
ಕ್ವಾರೆಯ ಅವಶೇಷಗಳಡಿ ಕಾಣೆಯಾಗಿರುವ ಕಾರ್ಮಿಕರ ರಕ್ಷಣಾ ಕಾರ್ಯ ನಡೆಯುತ್ತಿದೆ. ರಕ್ಷಣಾ ಕೆಲಸಕ್ಕೆ ಮಳೆ ಅಡ್ಡಿಯಾಗಿದೆ. ಸೈಕ್ಲೋನ್ನಿಂದಾಗಿ ಮಿಜೋರಾಂನಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿಯೇ ಈ ದುರಂತ ಸಂಭವಿಸಿದೆ. ಜೊತೆಗೆ ಅಲ್ಲಿನ ರಾಷ್ಟ್ರೀಯ ಹೆದ್ದಾರಿ 6ರಲ್ಲಿ ಭೂ-ಕುಸಿತ ಸಂಭವಿಸಿದೆ. ಮಾತ್ರವಲ್ಲ, ಅನೇಕ ರಾಜ್ಯ ಹೆದ್ದಾರಿಗಳೂ ಬಂದ್ ಆಗಿವೆ. ಇದರಿಂದ ವಾಹನ ಸಂಚಾರವೂ ಅಸ್ತವ್ಯಸ್ತಗೊಂಡಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಕುಂಕುಮ ಕುತೂಹಲ..! ವಿಡಿಯೋ ಬಿಡುಗಡೆ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಬಗ್ಗೆ ಹೆಚ್ಚಿದ ಈ ಅನುಮಾನ..!
ಮಳೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ನೌಕರರಿಗೂ ರಜೆ ಘೋಷಿಸಲಾಗಿದೆ. ಅಗತ್ಯ ಕೆಲಸಗಳನ್ನು ಹೊರತುಪಡಿಸಿ ಮನೆಯಲ್ಲೇ ಇರುವಂತೆ ರಾಜ್ಯದ ಜನರಿಗೆ ಎಚ್ಚರಿಕೆ ನೀಡಲಾಗಿದೆ.
10 people have died as a stone quarry collapsed on the outskirts of #Aizawl following incessant #rains. Police personnel are engaged in rescue operations. #Mizoram #landslide #stonequarry pic.twitter.com/AXhhsAYyFC
— Priyathosh Agnihamsa (@priyathosh6447) May 28, 2024
ಇದನ್ನೂ ಓದಿ:ಸಮಸ್ಯೆ ಇದ್ದಾಗ ಮಾತ್ರ KL ರಾಹುಲ್ ನೆನಪಾಗ್ತಾರೆ.. ಈ ವಿಚಾರದಲ್ಲಿ ತಪ್ಪು ಮಾಡಿಬಿಡ್ತಾ ಬಿಸಿಸಿಐ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ