ಬರೋಬ್ಬರಿ 12 ಅಡಿ ಉದ್ದದ ಕಾಳಿಂಗ.. ಉರಗ ತಜ್ಞರ ಮೇಲೆ ಅಟ್ಯಾಕ್ ಮಾಡಲು ಮುಂದಾಗಿದ್ದ ಸರ್ಪ ಸೆರೆ!

author-image
Veena Gangani
Updated On
ಬರೋಬ್ಬರಿ 12 ಅಡಿ ಉದ್ದದ ಕಾಳಿಂಗ.. ಉರಗ ತಜ್ಞರ ಮೇಲೆ ಅಟ್ಯಾಕ್ ಮಾಡಲು ಮುಂದಾಗಿದ್ದ ಸರ್ಪ ಸೆರೆ!
Advertisment
  • ರಸ್ತೆಯ ಬಳಿ ಅವಿತು ಕುಳಿತ್ತಿದ್ದ ಕಾಳಿಂಗ ಸರ್ಪ ಸೆರೆ
  • ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಕಾಡಿಗೆ ಬಿಟ್ಟ ಉರಗ ತಜ್ಞ
  • ಕಾಳಿಂಗ ಸರ್ಪ ಪ್ರತ್ಯಕ್ಷದಿಂದ ಗ್ರಾಮಸ್ಥರಲ್ಲಿ ಹೆಚ್ಚಿದ್ದ ಆತಂಕ

ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇನ್ನೂ 1 ವಾರ ರಾಜ್ಯದ ಬಹುತೇಕ ಕಡೆಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗಲಿದೆ. ಆದರೆ ಮಳೆ ನಡುವೆಯೇ ಕಾಫಿನಾಡಿನಲ್ಲಿ ರಸ್ತೆಯ ಬಳಿ ಅವಿತು ಕುಳಿತ್ತಿದ್ದ ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲಾಗಿದೆ.

ಇದನ್ನೂ ಓದಿ: ಜಸ್ಟ್‌ 7 ತಿಂಗಳಲ್ಲಿ 25 ಮದುವೆ.. 23 ವರ್ಷದ ಸುಂದರಿ ಸಂಚು ಬಾಲಿವುಡ್‌ ಸಿನಿಮಾನೂ ಮೀರಿಸಿದ ಸ್ಟೋರಿ!

publive-image

ಹೌದು, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ವಾಟೆಖಾನ್ ಗ್ರಾಮದಲ್ಲಿ ಬರೋಬ್ಬರಿ 12 ಅಡಿ ದೈತ್ಯ ಗಾತ್ರದ ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲಾಗಿದೆ. ಈ ಕಾಳಿಂಗ ಸರ್ಪವು ರಸ್ತೆಯ ಬಳಿ ಅವಿತು ಕುಳಿತು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತ್ತು.

publive-image

ಹೀಗಾಗಿ ಕಾಳಿಂಗ ಸರ್ಪ ಕಂಡ ಕೂಡಲೇ ಉರಗ ತಜ್ಞರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾರೆ. ಆ ಕೂಡಲೇ ಸ್ಥಳಕ್ಕೆ ಬಂದ ಉರಗ ತಜ್ಞ ಆರೀಫ್ ಸರ್ಪವನ್ನು ಸೆರೆ ಹಿಡಿದಿದ್ದಾರೆ.

publive-image

ಈ ಭಾಗದಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಹಾವುಗಳನ್ನು ಸುರಕ್ಷಿತವಾಗಿ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಬಿಡುತ್ತಿದ್ದಾರೆ. ಜಿಲ್ಲೆಯ ಕಳಸ, ಶೃಂಗೇರಿ ಹಾಗೂ ಮೂಡಿಗೆರೆ ತಾಲೂಕಿನ ಕೆಲ ಭಾಗಗಳಲ್ಲಿ ದೈತ್ಯ ಹಾವುಗಳು ಕಾಣಿಸಿಕೊಳ್ಳುತ್ತಿವೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment