/newsfirstlive-kannada/media/post_attachments/wp-content/uploads/2024/12/ALLU-ARJUN.jpg)
ಹೈದರಾಬಾದ್: ಪುಷ್ಪ-2 ಪ್ರದರ್ಶನದ ವೇಳೆ ಕಾಲ್ತುಳಿತಕ್ಕೆ ಮಹಿಳೆ ಬಲಿಯಾಗಿದ್ದ ಕೇಸ್ನಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅರೆಸ್ಟ್ ಮಾಡಿದ ನಂತರ ಪೊಲೀಸ್ರು ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ನಾಂಪಲ್ಲಿ ಕೋರ್ಟ್ನಲ್ಲಿ ಹಾಜರುಪಡಿಸಿದ್ರು. ಕೋರ್ಟ್ ಈಗ ಮಹತ್ವದ ಆದೇಶ ಹೊರಡಿಸಿದ್ದು, 14 ದಿನಗಳ ಕಾಲ ಅಲ್ಲು ಅರ್ಜುನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಅಲ್ಲು ಅರ್ಜು ಅರೆಸ್ಟ್
ಇಂದು ಬೆಳಿಗ್ಗೆ ಚಿಕ್ಕಡಪಲ್ಲಿ ಪೊಲೀಸರು ಅಲ್ಲು ಅರ್ಜುನ್ ಮನೆಗೆ ಹೋಗಿ ಅರೆಸ್ಟ್ ಮಾಡಿದ್ದಾರೆ. ಕಾಫಿ ಕುಡಿಯುತ್ತಿದ್ದ ಅಲ್ಲು ಅರ್ಜುನ್ ಅವರನ್ನು ಪೊಲೀಸ್ರು ಬಂಧಿಸಿದ್ದಾರೆ. ಮೃತ ಮಹಿಳೆ ರೇವತಿ ಪತಿ ನೀಡಿದ ದೂರಿನ ಆಧಾರದ ಮೇರೆಗೆ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಲಾಗಿದೆ.
ಈಗಾಗಲೇ ಕೇಸ್ ಸಂಬಂಧ ಸಂಧ್ಯಾ ಥಿಯೇಟರ್ ಮಾಲೀಕ, ಮ್ಯಾನೇಜರ್ ಹಾಗೂ ಅಲ್ಲು ಅರ್ಜುನ್ ಜೊತೆಗೆ ಇದ್ದ ಬೌನ್ಸರ್ಗಳನ್ನು ಬಂಧಿಸಲಾಗಿದೆ. ಅಲ್ಲು ಅರ್ಜುನ್ ವಿರುದ್ಧ 105, 118 (1) ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಈ ಸೆಕ್ಷನ್ ಪ್ರಕಾರ ತಪ್ಪು ಸಾಬೀತಾದ್ರೆ ಸುಮಾರು 10 ವರ್ಷ ಜೈಲು ಶಿಕ್ಷೆ ಆಗಲಿದೆ.
ಇದನ್ನೂ ಓದಿ:ಕೋರ್ಟ್ನಲ್ಲಿ ಹೀಗಾದರೆ ಜೈಲೇ ಗತಿ.. ಅಲ್ಲು ಅರ್ಜುನ್ ಯಾವ ಜೈಲು ಸೇರ್ತಾರೆ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ