ಕೋಲ್ಕತ್ತ ಹೋಟೆಲ್​​ನಲ್ಲಿ ಭೀಕರ ಬೆಂಕಿ ಅವಘಡ.. 14 ಮಂದಿ ಸಜೀವ ದಹನ

author-image
Ganesh
Updated On
ಕೋಲ್ಕತ್ತ ಹೋಟೆಲ್​​ನಲ್ಲಿ ಭೀಕರ ಬೆಂಕಿ ಅವಘಡ.. 14 ಮಂದಿ ಸಜೀವ ದಹನ
Advertisment
  • ಪ್ರಸಿದ್ಧ ರಿತುರಾಜ್ ಹೋಟೆಲ್​ನಲ್ಲಿ ಅಗ್ನಿ ದುರಂತ
  • ದುರಂತ ಸ್ಥಳದಲ್ಲೇ ಜೀವ ಕಳೆದುಕೊಂಡ 14 ಮಂದಿ
  • ಬೆಂಕಿ ನಿಯಂತ್ರಣಕ್ಕೆ ತಂದ ಅಗ್ನಿಶಾಮಕ ಸಿಬ್ಬಂದಿ

ಕೋಲ್ಕತ್ತಾ ನಗರದ ಬುರ್ರಾಬಜಾರ್ ಪ್ರದೇಶದಲ್ಲಿರೋ ರಿತುರಾಜ್ ಹೋಟೆಲ್‌ನಲ್ಲಿ (Rituraj Hotel) ಭಾರೀ ಬೆಂಕಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ 14 ಜನರು ಜೀವ ಕಳೆದುಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಸುಮಾರು 8 ಅಗ್ನಿ ಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕದಳ ಸಿಬ್ಬಂದಿ ಸತತ ರಕ್ಷಣೆ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಬೆಂಕಿಯಲ್ಲಿ ಸಜೀವ ದಹನಗೊಂಡ14 ಮೃತದೇಹವನ್ನು ಹೊರತೆಗೆಯಲಾಗಿದೆ. ಬೆಂಕಿ ಅವಘಡ ಬಗ್ಗೆ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment