ಪರ ಪುರುಷನೊಂದಿಗೆ ಪತ್ನಿ ಅನೈತಿಕ ಸಂಬಂಧ!
ಹತ್ಯೆ ನಡೆದ ಮೂರು ದಿನಗಳ ಬಳಿಕ ಶವ ಪತ್ತೆ
ಆರೋಪಿ ತಂದೆಯನ್ನ ಬಂಧಿಸಿದ ಪೊಲೀಸರು
ರಾಯಚೂರು: 14 ತಿಂಗಳ ಹಸುಗೂಸನ್ನು ಸ್ವಂತ ತಂದೆಯೇ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಅಭಿನವ (14) ಮೃತ ಹಸುಗೂಸು. ಮಹಾಂತೇಶ್ (32) ಬಂಧಿತ ಆರೋಪಿ.
ಆರೋಪಿ ಮಹಾಂತೇಶ್ ಸ್ವಂತ ಮಗುವನ್ನೇ ಕೊಂದು 3 ದಿನ ಕಲ್ಲಿನ ಪೊಟರೆಯಲ್ಲಿ ಮುಚ್ಚಿಟ್ಟಿದ್ದ. ಮತ್ತೊಂದು ಮದುವೆಯಾಗುವ ಆಸೆಯಿಂದ ಮಗುವನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾಗಿದೆ. ಪರ ಪುರುಷನೊಂದಿಗೆ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಳಂತೆ. ಈ ವಿಷಯ ತಿಳಿದು ಮತ್ತೊಂದು ಮದುವೆಗೆ ತಯಾರಿ ನಡೆಸಿದ್ದ ಪತಿ ಮಹಾಂತೇಶ್. ಆದರೆ ಮರು ಮದುವೆಗೆ ಮಗು ಅಡ್ಡಿಯಾಗುತ್ತದೆ ಎಂದು ಮಗುವನ್ನು ಹತ್ಯೆ ಮಾಡಿದ್ದಾನೆ. ಹತ್ಯೆ ನಡೆದು ಮೂರು ದಿನಗಳ ಬಳಿಕ ಮಗುವಿನ ಶವ ಪತ್ತೆಯಾಗಿದೆ. ಈ ವಿಷಯ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಆರೋಪಿ ತಂದೆಯನ್ನ ಬಂಧಿಸಿದ್ದಾರೆ.
ಇನ್ನು, ಪೊಲೀಸ್ ಅಧಿಕಾರಿಗಳಿಗೆ ಮೊದಲು ಮಗುವನ್ನು ಸುಟ್ಟು ಹಾಕಿರುವುದಾಗಿ ಮಾಹಿತಿ ಬಂದಿತ್ತು. ಬಳಿಕ ಆರೋಪಿ ತಂದೆಯನ್ನು ಬಂಧಿಸಿ ಲಾಠಿ ರುಚಿ ತೋರಿಸಿದ್ದಾಗ ಅಸಲಿ ಸತ್ಯ ಬೆಳಕಿಗೆ ಬಂದಿದೆ. ಸದ್ಯ ಈ ಕುರಿತು ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪರ ಪುರುಷನೊಂದಿಗೆ ಪತ್ನಿ ಅನೈತಿಕ ಸಂಬಂಧ!
ಹತ್ಯೆ ನಡೆದ ಮೂರು ದಿನಗಳ ಬಳಿಕ ಶವ ಪತ್ತೆ
ಆರೋಪಿ ತಂದೆಯನ್ನ ಬಂಧಿಸಿದ ಪೊಲೀಸರು
ರಾಯಚೂರು: 14 ತಿಂಗಳ ಹಸುಗೂಸನ್ನು ಸ್ವಂತ ತಂದೆಯೇ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಅಭಿನವ (14) ಮೃತ ಹಸುಗೂಸು. ಮಹಾಂತೇಶ್ (32) ಬಂಧಿತ ಆರೋಪಿ.
ಆರೋಪಿ ಮಹಾಂತೇಶ್ ಸ್ವಂತ ಮಗುವನ್ನೇ ಕೊಂದು 3 ದಿನ ಕಲ್ಲಿನ ಪೊಟರೆಯಲ್ಲಿ ಮುಚ್ಚಿಟ್ಟಿದ್ದ. ಮತ್ತೊಂದು ಮದುವೆಯಾಗುವ ಆಸೆಯಿಂದ ಮಗುವನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾಗಿದೆ. ಪರ ಪುರುಷನೊಂದಿಗೆ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಳಂತೆ. ಈ ವಿಷಯ ತಿಳಿದು ಮತ್ತೊಂದು ಮದುವೆಗೆ ತಯಾರಿ ನಡೆಸಿದ್ದ ಪತಿ ಮಹಾಂತೇಶ್. ಆದರೆ ಮರು ಮದುವೆಗೆ ಮಗು ಅಡ್ಡಿಯಾಗುತ್ತದೆ ಎಂದು ಮಗುವನ್ನು ಹತ್ಯೆ ಮಾಡಿದ್ದಾನೆ. ಹತ್ಯೆ ನಡೆದು ಮೂರು ದಿನಗಳ ಬಳಿಕ ಮಗುವಿನ ಶವ ಪತ್ತೆಯಾಗಿದೆ. ಈ ವಿಷಯ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಆರೋಪಿ ತಂದೆಯನ್ನ ಬಂಧಿಸಿದ್ದಾರೆ.
ಇನ್ನು, ಪೊಲೀಸ್ ಅಧಿಕಾರಿಗಳಿಗೆ ಮೊದಲು ಮಗುವನ್ನು ಸುಟ್ಟು ಹಾಕಿರುವುದಾಗಿ ಮಾಹಿತಿ ಬಂದಿತ್ತು. ಬಳಿಕ ಆರೋಪಿ ತಂದೆಯನ್ನು ಬಂಧಿಸಿ ಲಾಠಿ ರುಚಿ ತೋರಿಸಿದ್ದಾಗ ಅಸಲಿ ಸತ್ಯ ಬೆಳಕಿಗೆ ಬಂದಿದೆ. ಸದ್ಯ ಈ ಕುರಿತು ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ