ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿಂಹ
ಸಿಂಹ ಅಗಲಿಕೆಗೆ ಉದ್ಯಾನವನದ ಸಿಬ್ಬಂದಿ ಬೇಸರ
ವೈದ್ಯರಿಂದ ಮರಣೋತ್ತರ ಪರೀಕ್ಷೆ ಮುಕ್ತಾಯ
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿನ ಗಂಡು ಸಿಂಹವೊಂದು ಸಾವನ್ನಪ್ಪಿದೆ. ರಾಮ ಎಂಬ ಹೆಸರಿನ ಸಿಂಹ ನಿಧನವಾಗಿದ್ದು, ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿತ್ತು.
ಬನ್ನೇರುಘಟ್ಟ ಜೈವಿಕ ಉದ್ಯಾನವನದ ಪುನರ್ವಸತಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ರಾಮನಿಗೆ 14 ವರ್ಷ ಆಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿಂಹ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದೆ. ಮೃತ ಸಿಂಹದ ಮರಣೋತ್ತರ ಪರೀಕ್ಷೆಯನ್ನು ವೈದ್ಯರು ನಡೆಸಿದ್ದಾರೆ. ದೇಹದ ಕೆಲ ಅಂಗಾಂಗಳ ಮಾದರಿ ಸಂಗ್ರಹ ಮಾಡಿದ್ದಾರೆ.
ಮೃತ ಸಿಂಹದ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿದೆ. ಸಿಂಹವನ್ನು ಕಳೆದುಕೊಂಡ ಜೈವಿಕ ಉದ್ಯಾನವನದ ಸಿಬ್ಬಂದಿ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಮುಖ ಆಕರ್ಷಣೆಯಾಗಿದ್ದ ಸಿಂಹ ರಾಮ ಇನ್ಮೇಲೆ ಪ್ರವಾಸಿಗರಿಗೆ ನೋಡಲು ಸಿಗುವುದಿಲ್ಲ. ಉದ್ಯಾನವನಕ್ಕೆ ರಾಮನ ಅನುಪಸ್ಥಿತಿ ಕಾಡಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿಂಹ
ಸಿಂಹ ಅಗಲಿಕೆಗೆ ಉದ್ಯಾನವನದ ಸಿಬ್ಬಂದಿ ಬೇಸರ
ವೈದ್ಯರಿಂದ ಮರಣೋತ್ತರ ಪರೀಕ್ಷೆ ಮುಕ್ತಾಯ
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿನ ಗಂಡು ಸಿಂಹವೊಂದು ಸಾವನ್ನಪ್ಪಿದೆ. ರಾಮ ಎಂಬ ಹೆಸರಿನ ಸಿಂಹ ನಿಧನವಾಗಿದ್ದು, ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿತ್ತು.
ಬನ್ನೇರುಘಟ್ಟ ಜೈವಿಕ ಉದ್ಯಾನವನದ ಪುನರ್ವಸತಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ರಾಮನಿಗೆ 14 ವರ್ಷ ಆಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿಂಹ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದೆ. ಮೃತ ಸಿಂಹದ ಮರಣೋತ್ತರ ಪರೀಕ್ಷೆಯನ್ನು ವೈದ್ಯರು ನಡೆಸಿದ್ದಾರೆ. ದೇಹದ ಕೆಲ ಅಂಗಾಂಗಳ ಮಾದರಿ ಸಂಗ್ರಹ ಮಾಡಿದ್ದಾರೆ.
ಮೃತ ಸಿಂಹದ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿದೆ. ಸಿಂಹವನ್ನು ಕಳೆದುಕೊಂಡ ಜೈವಿಕ ಉದ್ಯಾನವನದ ಸಿಬ್ಬಂದಿ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಮುಖ ಆಕರ್ಷಣೆಯಾಗಿದ್ದ ಸಿಂಹ ರಾಮ ಇನ್ಮೇಲೆ ಪ್ರವಾಸಿಗರಿಗೆ ನೋಡಲು ಸಿಗುವುದಿಲ್ಲ. ಉದ್ಯಾನವನಕ್ಕೆ ರಾಮನ ಅನುಪಸ್ಥಿತಿ ಕಾಡಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ