/newsfirstlive-kannada/media/post_attachments/wp-content/uploads/2023/08/rashi-bhavishya-25.jpg)
ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.
ಶ್ರೀ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ, ಚತುರ್ಥಿ ತಿಥಿ, ಜ್ಯೇಷ್ಠಾ ನಕ್ಷತ್ರ, ರಾಹುಕಾಲ ಗುರುವಾರ ಮಧ್ಯಾಹ್ನ 1.30 ರಿಂದ 3.00 ರವರೆಗೆ
ಮೇಷ ರಾಶಿ
- ಕುಟುಂಬ ಸದಸ್ಯರೊಂದಿಗೆ ಸಂತೋಷದ ಸಮಯ ಕಳೆಯುತ್ತೀರಿ
- ಹಿರಿಯರ ಆಶೀರ್ವಾದ, ಮಾರ್ಗದರ್ಶನ ಸಿಗುತ್ತದೆ
- ನಿಮ್ಮ ಜವಾಬ್ದಾರಿಗಳಿಗೆ ಬದ್ಧರಾಗಿರಬೇಕು
- ಮನೆಗೆ ದಿಢೀರಂತ ಅತಿಥಿಗಳ ಆಗಮನ ಸಾಧ್ಯತೆಯಿದೆ
- ಮೇಲಾಧಿಕಾರಿಗಳಿಂದ ಉದ್ಯೋಗಿಗಳಿಗೆ ಒತ್ತಡ ಇರುವುದಿಲ್ಲ
- ಅವಿವಾಹಿತ ಸ್ತ್ರೀಯರಿಗೆ ವಿವಾಹದ ವಿಚಾರ ಚರ್ಚೆಗೆ ಬರಬಹುದು
- ಆಂಜನೇಯ ಸ್ವಾಮಿಯನ್ನು ಪ್ರಾರ್ಥನೆ ಮಾಡಿ
ವೃಷಭ
- ಸರ್ಕಾರಿ ಕೆಲಸಗಳಲ್ಲಿ ಅಡಚಣೆಯಾಗಬಹುದು
- ಹವಾಮಾನ ಬದಲಾವಣೆಯಿಂದ ತಲೆನೋವು, ಆಲಸ್ಯ ಉಂಟಾಗಬಹುದು
- ಪ್ರೇಮಿಗಳು ಉತ್ಸುಕರಾಗಿರುವ ದಿನ
- ಈ ದಿನ ಅಧ್ಯಯನ, ಧ್ಯಾನಕ್ಕೆ ಶರೀರ ಸ್ಪಂದಿಸುವುದಿಲ್ಲ
- ವಾಹನ ಚಾಲನೆ ಮಾಡುವಾಗ ಜಾಗರೂಕರಾಗಿರಿ
- ಸರಸ್ವತಿ ದೇವಿಯ ಪ್ರಾರ್ಥನೆ ಮಾಡಿ
ಮಿಥುನ
- ಮಕ್ಕಳಿಗಾಗಿ ಹೆಚ್ಚು ಹಣ ಖರ್ಚು ಮಾಡುತ್ತೀರಿ
- ಕಾಲಿನ ಭಾಗದಲ್ಲಿ ನೋವು ಕಾಣಬಹುದು
- ಇಂದು ಈ ರಾಶಿಯವರಿಗೆ ಕೋಪ ಹೆಚ್ಚಾಗುವ ಸಾಧ್ಯತೆಯಿದೆ
- ನಿಮ್ಮ ಕೋಪವನ್ನು ಸ್ನೇಹಿತರ ಹಾಗೂ ಮನೆಯವರ ಮೇಲೆ ತೋರಿಸಬಾರದು
- ಸಂಗಾತಿಯೊಂದಿಗೆ ಉತ್ತಮ ನಡುವಳಿಕೆಯಿಂದಿರಿ
- ಮೃತ್ಯುಂಜಯನನ್ನು ಪ್ರಾರ್ಥನೆ ಮಾಡಿ
ಕಟಕ
- ವ್ಯವಹಾರದ ದೃಷ್ಟಿಯಿಂದ ಈ ದಿನ ಚೆನ್ನಾಗಿಲ್ಲ
- ಮಾನಸಿಕ ಬೇಸರ, ಅಸಮಾಧಾನ ಹೆಚ್ಚಾಗಿ ಕಾಡುತ್ತದೆ
- ಪ್ರಮುಖ ಉಪಕರಣ ಅಥವಾ ವಾಹನಕ್ಕೆ ಹಾನಿ ಸಂಭವ ಇದೆ
- ಇವತ್ತು ವಾಹನ ಚಾಲನೆ ಮಾಡದೆ ಇದ್ದರೆ ಒಳ್ಳೆಯದು
- ನಿದ್ರಾಭಂಗವಾಗಬಹುದು ಗಮನಿಸಿ
- ದುರ್ಗಾದೇವಿಯನ್ನು ಪ್ರಾರ್ಥನೆ ಮಾಡಿ
ಸಿಂಹ
- ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತವೆ
- ಹೊಸ ಸ್ನೇಹಿತರು ಸಿಗಬಹುದು
- ವ್ಯಾಪಾರ, ವ್ಯವಹಾರ ಮಾಡುವವರಿಗೆ ಲಾಭದ ದಿನ
- ಶಿಕ್ಷಣ ಕ್ಷೇತ್ರದಲ್ಲಿರುವವರಿಗೆ ಉತ್ತಮ ಸಾಧನೆಗೆ ಅವಕಾಶವಿದೆ
- ಪ್ರಯಾಣ ವಿಚಾರವಿದ್ದರೆ ನಾಳೆಗೆ ಮುಂದೂಡುವುದು ಒಳ್ಳೆಯದು
- ತುಂಬಾ ಅಗತ್ಯವಿದ್ದರೆ ರಾಹುಕಾಲದ ನಂತರ ಪ್ರಯಾಣ ಮಾಡಿ
- ಹಣಕಾಸಿನ ವ್ಯವಹಾರವಿದ್ದರೆ ಮಧ್ಯಾಹ್ನದ ನಂತರ ಮಾಡಬಹುದು
- ಶ್ರೀ ಲಕ್ಷ್ಮಿನಾರಾಯಣನನ್ನು ಪ್ರಾರ್ಥನೆ ಮಾಡಿ
ಕನ್ಯಾ
- ಸಂಬಂಧಿಕರು, ಸ್ನೇಹಿತರು ಹಣ ಅಥವಾ ವಸ್ತುವನ್ನು ಸಾಲವಾಗಿ ಕೇಳಬಹುದು
- ಬಹಳ ಯೋಚನೆ ಮಾಡಿ ಸಾಲ ಕೊಡಿ ಅನಾನುಕೂಲವಾಗುವ ಸಾಧ್ಯತೆ ಇದೆ
- ಧಾರ್ಮಿಕ ಕಾರ್ಯಗಳ ಬಗ್ಗೆ ಸಂಕಲ್ಪ ಮಾಡುವ ಮುನ್ನ ಎಚ್ಚರವಹಿಸಿ
- ಸಂಕಲ್ಪ, ಹರಕೆ ತೀರಿಸುವುದಕ್ಕೆ ಆಗದೆ ತೊಂದರೆಯಾಗುವ ಸಾಧ್ಯತೆಯಿದೆ
- ಜನರು ನಿಮ್ಮ ಮಾತನ್ನು ತಪ್ಪಾಗಿ ತಿಳಿಯುವ ಸಾಧ್ಯತೆ ಇದ್ದು ಮಿತವಾಗಿ ಮಾತನಾಡಿ
- ಕಾರ್ತವೀರಾರ್ಜುನನ್ನು ಪ್ರಾರ್ಥನೆ ಮಾಡಿ
ತುಲಾ
- ಹೊಸ ಕೆಲಸಗಳನ್ನು ಆರಂಭಿಸಲು ಬಹಳ ಉತ್ತಮ ದಿನ
- ವ್ಯಾಪಾರ, ವ್ಯವಹಾರಗಳಲ್ಲಿ ತುಂಬಾ ಅನುಕೂಲವಾಗುವ ದಿನ
- ಹಳೆಯ ಆಸೆಗಳು ಇಂದು ಈಡೇರುತ್ತವೆ
- ಸಮಾಜದಲ್ಲಿ ಗೌರವ, ಪ್ರಶಸ್ತಿಗಳು ದೊರೆಯುವ ದಿನ
- ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ
- ಇಷ್ಟದೇವತಾ ಆರಾಧನೆ ಮಾಡಿ
ವೃಶ್ಚಿಕ
- ಶರೀರ ಭಾಗದಲ್ಲಿ ಇದಕ್ಕಿದ್ದಂತೆ ನೋವು ಕಾಣಿಸಬಹುದು
- ಇವತ್ತು ದೂರದ ಪ್ರಯಾಣ ಮುಂದೂಡುವುದು ಒಳ್ಳೆಯದು
- ಹಳೆಯ ಸಾಲ ಅಥವಾ ಬಾಕಿಯಿಂದ ತೊಂದರೆ, ಅವಮಾನದ ಸಾಧ್ಯತೆಯಿದೆ
- ಇಂದು ಯಾರಿಗೂ ಯಾವುದೇ ಭರವಸೆ ನೀಡಬೇಡಿ
- ಈ ದಿನ ತುಂಬಾ ಆಲಸ್ಯ ಕಾಡುವ ದಿನ
- ಆರೋಗ್ಯದ ಬಗ್ಗೆ ಹೆಚ್ಚು ಗಮನವಿರಲಿ ತಾತ್ಸಾರ ಬೇಡ
- ಧನ್ವಂತರಿಯನ್ನು ಪ್ರಾರ್ಥನೆ ಮಾಡಿ
ಧನಸ್ಸು
- ಸ್ಥಿರಾಸ್ತಿಯನ್ನು ಖರೀದಿಸುವ ಯೋಚನೆ ಬರುತ್ತದೆ
- ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ಸಂದರ್ಭ ಬರಬಹುದು
- ಪಿತ್ರಾರ್ಜಿತ ಆಸ್ತಿಯಿಂದ ಹಣ ಬರುವ ಸಾಧ್ಯತೆಯಿದೆ
- ವ್ಯಾಪಾರದಾರರಿಗೆ ಇಂದು ಹೆಚ್ಚು ಲಾಭದ ದಿನ
- ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡ ಶಿಸ್ತನ್ನು ಬೇರೆಯವರ ಮೇಲೆ ಹೇರಬೇಡಿ
- ಇಂದು ನಿಮ್ಮ ಮಾತು, ನಡೆನುಡಿ ಬಹಳ ವಿನಯದಿಂದ ಇರಲಿ
- ವರಾಹ ಸ್ವಾಮಿಯನ್ನು ಪ್ರಾರ್ಥನೆ ಮಾಡಿ
ಮಕರ
- ಮುಖ್ಯ ಕೆಲಸಗಳ ಬಗ್ಗೆ ನಿರ್ಲಕ್ಷ್ಯ ತೋರುವ ಸಾಧ್ಯತೆಯಿದೆ
- ಇಂದು ಅವಕಾಶ, ಅನುಕೂಲ ಕೈ ತಪ್ಪುವ ಸಾಧ್ಯತೆ ಹೆಚ್ಚು
- ಮಕ್ಕಳಿಂದ, ಚಿಕ್ಕವರಿಂದ ಬೆಂಬಲ ಪ್ರೋತ್ಸಾಹ ಸಿಗುತ್ತದೆ
- ನಿಮ್ಮಿಂದ ಬೇರೆಯವರಿಗೆ ಸಹಾಯವಾಗುತ್ತದೆ
- ಆದರೆ ಅವರು ನಿಮ್ಮನ್ನ ಮರೆಯುವ ಸಾಧ್ಯತೆ ಹೆಚ್ಚು
- ಶ್ರೀಲಕ್ಷ್ಮೀ ದೇವಿಯನ್ನು ಪ್ರಾರ್ಥನೆ ಮಾಡಿ
ಕುಂಭ
- ಕಾರ್ಯಕ್ಷೇತ್ರ, ಸಾರ್ವಜನಿಕ ಸ್ಥಳಗಳಲ್ಲಿ ನಿಮ್ಮನ್ನು ಅಲ್ಪರನ್ನಾಗಿ ಕಾಣಬಹುದು
- ನಿಮ್ಮ ಮನಸ್ಸಿನ ಚಂಚಲತೆ ನಿಗ್ರಹ ಮಾಡಿ
- ಮನೆಯ ವಾತಾವರಣ ಚೆನ್ನಾಗಿರುವುದಿಲ್ಲ
- ಸಣ್ಣ ಸಣ್ಣ ವಿಚಾರಗಳಿಗೆ ಜಗಳವಾಗಬಹುದು ತಾಳ್ಮೆಯಿರಲಿ
- ನಿಮ್ಮ ಮನಸ್ಸನ್ನು ನಿಮ್ಮ ಹತೋಟೆಯಲ್ಲಿ ಇಟ್ಟುಕೊಳ್ಳಿ
- ಕುಲಗುರುವನ್ನು ಪ್ರಾರ್ಥನೆ ಮಾಡಿ
ಮೀನ
- ನಿಮ್ಮ ಮನೆಯವರಿಗೆ ನಿಮ್ಮ ಬಗ್ಗೆ ಋಣಾತ್ಮಕ ಅಭಿಪ್ರಾಯಗಳು ಹೆಚ್ಚು
- ಎಣ್ಣೆಯಿಂದ ಕರಿದ ಪದಾರ್ಥಗಳನ್ನು ಸಿದ್ಧ ಆಹಾರಗಳನ್ನು ತ್ಯಜಿಸುವುದು ಒಳಿತು
- ಅವಕಾಶ ಮಾಡಿಕೊಂಡು ಧ್ಯಾನ-ಯೋಗ ಮಾಡಿ ಆಲಸ್ಯ ಬೇಡ
- ನಿಮಗಿರುವ ಅನುಕೂಲವನ್ನು ಸರಿಯಾಗಿ ಉಪಯೋಗ ಮಾಡಿಕೊಳ್ಳಿ
- ಕೆಲಸದ ಒತ್ತಡದಿಂದ ನಿಮಗೆ ನಿರಾಶೆಯಾಗಬಹುದು
- ಕುಲದೇವರನ್ನು ಆರಾಧನೆ ಮಾಡಿ
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ