ಬೆಂಗಳೂರಲ್ಲಿ ಮತ್ತೊಂದು ಬರ್ಬರ ಕೊಲೆ.. 17 ವರ್ಷದ ಬಾಲಕನ ತಲೆಗೆ ರಾಡ್​ನಿಂದ ಹೊಡೆದು ಹತ್ಯೆ..

author-image
Ganesh
Updated On
ಬೆಂಗಳೂರಲ್ಲಿ ಮತ್ತೊಂದು ಬರ್ಬರ ಕೊಲೆ.. 17 ವರ್ಷದ ಬಾಲಕನ ತಲೆಗೆ ರಾಡ್​ನಿಂದ ಹೊಡೆದು ಹತ್ಯೆ..
Advertisment
  • ಪೊಲೀಸರು ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
  • ಅಬ್ಬಿಗೆರೆ ನಿವಾಸಿ ಮಂಜುನಾಥ್ ಕೊಲೆಯಾದ ದುರ್ದೈವಿ
  • ಪ್ರೀತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ

ಬೆಂಗಳೂರು: 17 ವರ್ಷದ ಬಾಲಕನನ್ನು ಬರ್ಬರವಾಗಿ ಹತ್ಯೆಗೈದು ಬಿಸಾಡಿ ಹೋಗಿರುವ ಘಟನೆ ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಬ್ಬಿಗೆರೆ ನಿವಾಸಿ ಮಂಜುನಾಥ್ ಕೊಲೆಯಾದ ದುರ್ದೈವಿ. ಮೊನ್ನೆ ರಾತ್ರಿ ಮಂಜುನಾಥ್ ತಲೆಗೆ ರಾಡ್​ನಿಂದ ಹೊಡೆದು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಬಳಿಕ ಅಬ್ಬಿಗೆರೆ ಬಳಿಯ ಖಾಲಿ ಜಾಗದಲ್ಲಿ ಶವವನ್ನು ಎಸೆದು ಬಂದಿದ್ದಾರೆ ಎನ್ನಲಾಗಿದೆ.

ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇಲ್ನೋಟಕ್ಕೆ ಪ್ರೀತಿ ವಿಚಾರಕ್ಕೆ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಭಾರತ vs ಆಸ್ಟ್ರೇಲಿಯಾ ಪಂದ್ಯ ರದ್ದು ಸಾಧ್ಯತೆ.. ಅಭಿಮಾನಿಗಳಿಂದ ಈಗಲೇ ಬೇಸರ.. ಕಾರಣ ಇಲ್ಲಿದೆ

ಇದನ್ನೂ ಓದಿ:DK ಶಿವಕುಮಾರ್​ಗೆ ಧರಿಸಿದ್ದ ಶಾಲೇ ಸಂಕಷ್ಟ.. ‘ಶಾಲು ಅಸ್ತ್ರ’ ಪ್ರಯೋಗಿಸಿದ ಬಿಜೆಪಿ, ಏನದು..

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment