ಸ್ಕಿಡ್ ಆಗಿ ಕಣಿವೆಗೆ ಉರುಳಿ ಬಿದ್ದ ಮಿನಿ ಗೂಡ್ಸ್ ವಾಹನ
ದುರ್ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯ.. ಸಾವು ಬದುಕಿನ ಮಧ್ಯೆ ಹೋರಾಟ
ಗೂಡ್ಸ್ ವಾಹನ ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಓಡೋಡಿ ಬಂದ ರಕ್ಷಣಾ ತಂಡ
ಮಿನಿ ಗೂಡ್ಸ್ ವಾಹನವೊಂದು ಕಣಿವೆಗೆ ಉರುಳಿ ಬಿದ್ದ ಘಟನೆ ಛತ್ತೀಸ್ಗಢದ ಕಬೀರ್ಧಾಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ದುರ್ಘಟನೆಯಲ್ಲಿ ಹದಿನೇಳು ಮಹಿಳೆಯರು ಮತ್ತು ಓರ್ವ ಪುರುಷ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಸೋಮವಾರದಂದು ಈ ಘಟನೆ ನಡೆದಿದೆ. ಜಜ್ದೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಹಪಾನಿ ಗ್ರಾಮದ ಬಳಿಯ ಬಂಜಾರಿ ಘಾಟ್ ಬಳಿ ಮಿನಿ ಗೂಡ್ಸ್ ಕಣಿವೆಗೆ ಉರುಳಿದೆ. ಮದ್ಯಾಹ್ನ 1.45ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ: PUC ಸೇರಲು ಟಿಸಿ ಕೊಟ್ಟಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.. ಡೆತ್ನೋಟ್ನಲ್ಲಿತ್ತು ನೋವಿನ ಕತೆ
ಸರಕು ತುಂಬುವ ವಾಹನದಲ್ಲಿ ಜನರು ಸಂಚರಿಸುತ್ತಿದ್ದರು. ಹೀಗೆ ಸಂಚರಿಸುವ ವೇಳೆ ವಾಹನ ಸ್ಕಿಡ್ ಆಗಿ ಕಣಿವೆಗೆ ಉರುಳಿ ಬಿದ್ದಿದೆ. ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಬಂದ ರಕ್ಷಣಾ ತಂಡ ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಜೊತೆಗೆ ಮೃತ ದೇಹವನ್ನು ಹೊರಗೆ ತೆಗೆದಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ಸ್ಕಿಡ್ ಆಗಿ ಕಣಿವೆಗೆ ಉರುಳಿ ಬಿದ್ದ ಮಿನಿ ಗೂಡ್ಸ್ ವಾಹನ
ದುರ್ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯ.. ಸಾವು ಬದುಕಿನ ಮಧ್ಯೆ ಹೋರಾಟ
ಗೂಡ್ಸ್ ವಾಹನ ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಓಡೋಡಿ ಬಂದ ರಕ್ಷಣಾ ತಂಡ
ಮಿನಿ ಗೂಡ್ಸ್ ವಾಹನವೊಂದು ಕಣಿವೆಗೆ ಉರುಳಿ ಬಿದ್ದ ಘಟನೆ ಛತ್ತೀಸ್ಗಢದ ಕಬೀರ್ಧಾಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ದುರ್ಘಟನೆಯಲ್ಲಿ ಹದಿನೇಳು ಮಹಿಳೆಯರು ಮತ್ತು ಓರ್ವ ಪುರುಷ ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಸೋಮವಾರದಂದು ಈ ಘಟನೆ ನಡೆದಿದೆ. ಜಜ್ದೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಹಪಾನಿ ಗ್ರಾಮದ ಬಳಿಯ ಬಂಜಾರಿ ಘಾಟ್ ಬಳಿ ಮಿನಿ ಗೂಡ್ಸ್ ಕಣಿವೆಗೆ ಉರುಳಿದೆ. ಮದ್ಯಾಹ್ನ 1.45ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ: PUC ಸೇರಲು ಟಿಸಿ ಕೊಟ್ಟಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.. ಡೆತ್ನೋಟ್ನಲ್ಲಿತ್ತು ನೋವಿನ ಕತೆ
ಸರಕು ತುಂಬುವ ವಾಹನದಲ್ಲಿ ಜನರು ಸಂಚರಿಸುತ್ತಿದ್ದರು. ಹೀಗೆ ಸಂಚರಿಸುವ ವೇಳೆ ವಾಹನ ಸ್ಕಿಡ್ ಆಗಿ ಕಣಿವೆಗೆ ಉರುಳಿ ಬಿದ್ದಿದೆ. ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಬಂದ ರಕ್ಷಣಾ ತಂಡ ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಜೊತೆಗೆ ಮೃತ ದೇಹವನ್ನು ಹೊರಗೆ ತೆಗೆದಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ