newsfirstkannada.com

ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣ.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಬಾಲಕ ಸಾವು

Share :

Published March 18, 2024 at 10:50am

Update March 18, 2024 at 10:55am

    ಉಪವಾಸ ಮುಗಿಯುತ್ತಿದ್ದಂತೆಯೇ ಪಾನಿಪೂರಿ ಸೇವಿಸಿದ ಮಕ್ಕಳು

    ಜಾಮೀಯಾ ಮಸೀದಿ ಬಳಿ ಪಾನಿಪೂರಿ ಸೇವಿಸಿದ್ದ ಮಕ್ಕಳು

    ಪಾನಿಪೂರಿ ಸೇವನೆ ಬಳಿಕ ಮಕ್ಕಳಲ್ಲಿ ವಾಂತಿ ಬೇಧಿ, ಹೊಟ್ಟೆ ನೋವು

ದಾವಣಗೆರೆ: ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಕೇಸ್ ವಿಚಾರ ಸಂಬಂಧ ಚಿಕಿತ್ಸೆ ಫಲಕಾರಿಯಾಗದೆ ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಮೃತ ಬಾಲಕನನ್ನ ಹಜರತ್ ಬಿಲಾಲ್ ಬಿನ್ ಇರ್ಫಾನ್ ಎನ್ನಲಾಗ್ತಿದೆ.

ರಂಜಾನ್ ಹಬ್ಬದ ಹಿನ್ನಲೆ ಮಕ್ಕಳು ಉಪವಾಸ ಇದ್ದರು, ಉಪವಾಸ ಅಂತ್ಯ ಮಾಡಿ ಜಾಮೀಯಾ ಮಸೀದಿ ಬಳಿ ಪಾನಿಪೂರಿ ಸೇವಿಸಿದ್ದರು. ಪಾನಿಪೂರಿ ಸೇವನೆ ಬಳಿಕ ಮಕ್ಕಳಲ್ಲಿ ವಾಂತಿ ಬೇಧಿ, ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ನಾಲ್ವರು ಮಕ್ಕಳನ್ನ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿತ್ತು. ಆದರೆ ಇದೀಗ ಓರ್ವ ಬಾಲಕ ಸಾವನ್ನಪ್ಪಿದ್ದಾನೆ.

ಏನಿದು ಘಟನೆ?

ಹರಿಹರ ತಾಲೂಕಿನ ಮಲೆಬೆನ್ನೂರು ಪಟ್ಟಣದಲ್ಲಿ ನಡೆದ ಘಟನೆ. ಮಲೆಬೆನ್ನೂರು ಪಟ್ಟಣದಲ್ಲಿ ಕೆಲ ಕಡೆ ಪಾನಿಪುರಿ ಮಾರಾಟ ಮಾಡಲಾಗುತ್ತಿತ್ತು. ಇದೇ ಪಾನಿಪುರಿ ತಿದ್ದಿದ್ದ ಮಕ್ಕಳು ವಾಂತಿ ಭೇದಿಯಿಂದ ಅಸ್ವಸ್ಥರಾಗಿದ್ದರು. ಕೂಡಲೇ ಅಸ್ವಸ್ಥಗೊಂಡ ಮಕ್ಕಳನ್ನು ಮಲೆಬೆನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಿಫ್ಟ್​ ಮಾಡಲಾಗಿತ್ತು.

ಇನ್ನು ಅಸ್ವಸ್ಥಗೊಂಡ 19 ಮಕ್ಕಳಲ್ಲಿ ಒಂದು ಮಗವಿನ ಸ್ಥಿತಿ ಚಿಂತಾಜನಕವಾಗಿತ್ತು. ಮಗುವಿಗೆ ದಾವಣಗೆರೆ ಬಾಪುಜಿ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೀಗ ಹಜರತ್ ಬಿಲಾಲ್ ಬಿನ್ ಇರ್ಫಾನ್ ಸಾವನ್ನಪ್ಪಿದ್ದಾನೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣ.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಬಾಲಕ ಸಾವು

https://newsfirstlive.com/wp-content/uploads/2024/03/panipuri-1.jpg

    ಉಪವಾಸ ಮುಗಿಯುತ್ತಿದ್ದಂತೆಯೇ ಪಾನಿಪೂರಿ ಸೇವಿಸಿದ ಮಕ್ಕಳು

    ಜಾಮೀಯಾ ಮಸೀದಿ ಬಳಿ ಪಾನಿಪೂರಿ ಸೇವಿಸಿದ್ದ ಮಕ್ಕಳು

    ಪಾನಿಪೂರಿ ಸೇವನೆ ಬಳಿಕ ಮಕ್ಕಳಲ್ಲಿ ವಾಂತಿ ಬೇಧಿ, ಹೊಟ್ಟೆ ನೋವು

ದಾವಣಗೆರೆ: ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಕೇಸ್ ವಿಚಾರ ಸಂಬಂಧ ಚಿಕಿತ್ಸೆ ಫಲಕಾರಿಯಾಗದೆ ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಮೃತ ಬಾಲಕನನ್ನ ಹಜರತ್ ಬಿಲಾಲ್ ಬಿನ್ ಇರ್ಫಾನ್ ಎನ್ನಲಾಗ್ತಿದೆ.

ರಂಜಾನ್ ಹಬ್ಬದ ಹಿನ್ನಲೆ ಮಕ್ಕಳು ಉಪವಾಸ ಇದ್ದರು, ಉಪವಾಸ ಅಂತ್ಯ ಮಾಡಿ ಜಾಮೀಯಾ ಮಸೀದಿ ಬಳಿ ಪಾನಿಪೂರಿ ಸೇವಿಸಿದ್ದರು. ಪಾನಿಪೂರಿ ಸೇವನೆ ಬಳಿಕ ಮಕ್ಕಳಲ್ಲಿ ವಾಂತಿ ಬೇಧಿ, ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ನಾಲ್ವರು ಮಕ್ಕಳನ್ನ ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿತ್ತು. ಆದರೆ ಇದೀಗ ಓರ್ವ ಬಾಲಕ ಸಾವನ್ನಪ್ಪಿದ್ದಾನೆ.

ಏನಿದು ಘಟನೆ?

ಹರಿಹರ ತಾಲೂಕಿನ ಮಲೆಬೆನ್ನೂರು ಪಟ್ಟಣದಲ್ಲಿ ನಡೆದ ಘಟನೆ. ಮಲೆಬೆನ್ನೂರು ಪಟ್ಟಣದಲ್ಲಿ ಕೆಲ ಕಡೆ ಪಾನಿಪುರಿ ಮಾರಾಟ ಮಾಡಲಾಗುತ್ತಿತ್ತು. ಇದೇ ಪಾನಿಪುರಿ ತಿದ್ದಿದ್ದ ಮಕ್ಕಳು ವಾಂತಿ ಭೇದಿಯಿಂದ ಅಸ್ವಸ್ಥರಾಗಿದ್ದರು. ಕೂಡಲೇ ಅಸ್ವಸ್ಥಗೊಂಡ ಮಕ್ಕಳನ್ನು ಮಲೆಬೆನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಿಫ್ಟ್​ ಮಾಡಲಾಗಿತ್ತು.

ಇನ್ನು ಅಸ್ವಸ್ಥಗೊಂಡ 19 ಮಕ್ಕಳಲ್ಲಿ ಒಂದು ಮಗವಿನ ಸ್ಥಿತಿ ಚಿಂತಾಜನಕವಾಗಿತ್ತು. ಮಗುವಿಗೆ ದಾವಣಗೆರೆ ಬಾಪುಜಿ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೀಗ ಹಜರತ್ ಬಿಲಾಲ್ ಬಿನ್ ಇರ್ಫಾನ್ ಸಾವನ್ನಪ್ಪಿದ್ದಾನೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More