ಎರಡು ಬೈಕ್ಗಳ ನಡುವೆ ಅಪಘಾತ, ಸವಾರರು ಸಾವು
ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ 2 ಬೈಕ್ ಸವಾರರು
ಬೈಕ್ ಅಪಘಾತದಲ್ಲಿ ಹಿಂಬದಿ ಕುಳಿತ್ತಿದ್ದ ಸವಾರರಿಗೂ ಗಂಭೀರ ಗಾಯ
ಮೈಸೂರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಹೆಳವರಹುಂಡಿ ಬಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗುಂಡ್ಲುಪೇಟೆ ತಾಲ್ಲೂಕಿನ ಬಿಳಿಗಿರಿ (30), ನರಸೀಪುರ ತಾಲ್ಲೂಕಿನ ಆದಿಬೆಟ್ಟಳ್ಳಿ ಗ್ರಾಮದ ನಾಗರಾಜು (35) ಮೃತ ದುರ್ದೈವಿಗಳು. ಬೈಕ್ನಲ್ಲಿದ್ದ ಹಿಂಬದಿ ಸವಾರರಿಗೂ ಗಂಭೀರ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬೈಕ್ ಸವಾರರಿಗೆ ಮೈಸೂರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ರಾತ್ರಿ ಮಲಗಿದ್ದವನ ಕುತ್ತಿಗೆ ಸೀಳಿ ಭೀಕರವಾಗಿ ಕೊಲೆ.. ದುಷ್ಕರ್ಮಿಗಳು, ಎಸ್ಕೇಪ್
ಅತ್ತ ಸಾವನ್ನಪ್ಪಿರುವ ಬೈಕ್ ಸವಾರರ ಸುದ್ದಿ ಕೇಳಿ ನರಸೀಪುರ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಕುಟುಂಬಸ್ಥರು ಸೇರಿದ್ದು, ಆಕ್ರಂದನ ಮುಗಿಲುಮುಟ್ಟಿದೆ. ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಎರಡು ಬೈಕ್ಗಳ ನಡುವೆ ಅಪಘಾತ, ಸವಾರರು ಸಾವು
ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಸಾವನ್ನಪ್ಪಿದ 2 ಬೈಕ್ ಸವಾರರು
ಬೈಕ್ ಅಪಘಾತದಲ್ಲಿ ಹಿಂಬದಿ ಕುಳಿತ್ತಿದ್ದ ಸವಾರರಿಗೂ ಗಂಭೀರ ಗಾಯ
ಮೈಸೂರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಹೆಳವರಹುಂಡಿ ಬಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗುಂಡ್ಲುಪೇಟೆ ತಾಲ್ಲೂಕಿನ ಬಿಳಿಗಿರಿ (30), ನರಸೀಪುರ ತಾಲ್ಲೂಕಿನ ಆದಿಬೆಟ್ಟಳ್ಳಿ ಗ್ರಾಮದ ನಾಗರಾಜು (35) ಮೃತ ದುರ್ದೈವಿಗಳು. ಬೈಕ್ನಲ್ಲಿದ್ದ ಹಿಂಬದಿ ಸವಾರರಿಗೂ ಗಂಭೀರ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬೈಕ್ ಸವಾರರಿಗೆ ಮೈಸೂರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ರಾತ್ರಿ ಮಲಗಿದ್ದವನ ಕುತ್ತಿಗೆ ಸೀಳಿ ಭೀಕರವಾಗಿ ಕೊಲೆ.. ದುಷ್ಕರ್ಮಿಗಳು, ಎಸ್ಕೇಪ್
ಅತ್ತ ಸಾವನ್ನಪ್ಪಿರುವ ಬೈಕ್ ಸವಾರರ ಸುದ್ದಿ ಕೇಳಿ ನರಸೀಪುರ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಕುಟುಂಬಸ್ಥರು ಸೇರಿದ್ದು, ಆಕ್ರಂದನ ಮುಗಿಲುಮುಟ್ಟಿದೆ. ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ