newsfirstkannada.com

ರಸ್ತೆ ಮಧ್ಯೆ ಕೆಟ್ಟು ನಿಂತ 2 KSRTC ಬಸ್​..‌ ಕಿಲೋ ಮೀಟರ್​ವರೆಗಿನ ಟ್ರಾಫಿಕ್​ನಲ್ಲಿ ನಿಂತ ಆ್ಯಂಬುಲೆನ್ಸ್​; ಎಲ್ಲಿ?

Share :

Published May 20, 2024 at 9:55am

    ನಿರಂತರವಾಗಿ ಸುರಿಯುತ್ತಿರುವ ಮಳೆಯಲ್ಲಿ ಪ್ರವಾಸಿಗರು ಪರದಾಟ

    ಬೆಳಗಿನ ಜಾವದಿಂದಲೂ ನಿಂತಲ್ಲೇ ನಿಂತಿರುವ ನೂರಾರು ವಾಹನಗಳು

    ಒಂದೇ ಟೈಮ್​ನಲ್ಲಿ ಎರಡು ಸರ್ಕಾರಿ ಬಸ್​ ಕೆಟ್ಟಿದ್ದಕ್ಕೆ ಜನರಿಗೆ ತೊಂದರೆ

ಚಿಕ್ಕಮಗಳೂರು: ಎರಡು ಕೆಎಸ್​ಆರ್​ಟಿಸಿ ಬಸ್​ಗಳು ರಸ್ತೆ ಮಧ್ಯೆ ಕೆಟ್ಟು ನಿಂತಿದ್ದರಿಂದ ಚಾರ್ಮಾಡಿ ಘಾಟ್​ನ ಅಣ್ಣಪ್ಪ ಸ್ವಾಮಿ ದೇವಾಲಯದ ಬಳಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಪ್ರವಾಸಿಗರು, ಸ್ಥಳೀಯ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.

ಚಾರ್ಮಾಡಿ ಘಾಟ್​ನ ಅಣ್ಣಪ್ಪ ಸ್ವಾಮಿ ದೇವಾಲಯದ ರಸ್ತೆಯಲ್ಲಿ ಎರಡು ಕೆಎಸ್​ಆರ್​ಟಿಸಿ ಬಸ್​ಗಳು ಕೆಟ್ಟು ನಿಂತಿವೆ. ಇದರಿಂದ ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು ಪ್ರವಾಸಿಗರು, ಸ್ಥಳೀಯ ಪ್ರಯಾಣಿಕರು ತೊಂದರೆಗೆ ಒಳಗಾಗಿ ಮಳೆಯಲ್ಲಿ ಯಾವ ಕಡೆ ಹೋಗಬೇಕು ಎನ್ನುವುದು ಗೊತ್ತಾಗದೆ ಸುಮ್ಮನೆ ಕುಳಿತ್ತಿದ್ದಾರೆ. ಇದು ಚಿಕ್ಕಮಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ಹೆದ್ದಾರಿಯಾಗಿದೆ.

ಇದನ್ನೂ ಓದಿ: ‘ಮೋದಿಗೆ ಯಾರೂ ವೋಟ್ ಹಾಕಬೇಡಿ’.. ಹೀಗೆ ಶಾಲಾ ಮಕ್ಕಳಿಗೆ ಹೇಳಿದ್ದ ಶಿಕ್ಷಕ ಅರೆಸ್ಟ್​.. ಏನಿದು ಕೇಸ್​?

ನಿರಂತರ ಮಳೆಯಿಂದ ಪ್ರವಾಸಿಗರು ಪ್ರಯಾಣಿಕರು ಪರದಾಡಿದ್ದು ಇಂತಹ ಟ್ರಾಫಿಕ್​ನಲ್ಲಿ ಮಂಗಳೂರಿಗೆ ಹೋಗುತ್ತಿದ್ದ ಆ್ಯಂಬುಲೆನ್ಸ್​ವೊಂದು ಸಿಲುಕಿಕೊಂಡಿದ್ದು ಒಳಗಿದ್ದ ರೋಗಿ ನೋವಿನಿಂದ ಬಳಲಿದ್ದಾರೆ. ಈ ಟ್ರಾಫಿಕ್ ಕ್ಲಿಯರ್ ಮಾಡಲು ಬಣಕಲ್ ಪೊಲೀಸರ‌ ಹರಸಾಹಸ ಪಡುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ರಸ್ತೆ ಮಧ್ಯೆ ಕೆಟ್ಟು ನಿಂತ 2 KSRTC ಬಸ್​..‌ ಕಿಲೋ ಮೀಟರ್​ವರೆಗಿನ ಟ್ರಾಫಿಕ್​ನಲ್ಲಿ ನಿಂತ ಆ್ಯಂಬುಲೆನ್ಸ್​; ಎಲ್ಲಿ?

https://newsfirstlive.com/wp-content/uploads/2024/05/CKM_GHAT.jpg

    ನಿರಂತರವಾಗಿ ಸುರಿಯುತ್ತಿರುವ ಮಳೆಯಲ್ಲಿ ಪ್ರವಾಸಿಗರು ಪರದಾಟ

    ಬೆಳಗಿನ ಜಾವದಿಂದಲೂ ನಿಂತಲ್ಲೇ ನಿಂತಿರುವ ನೂರಾರು ವಾಹನಗಳು

    ಒಂದೇ ಟೈಮ್​ನಲ್ಲಿ ಎರಡು ಸರ್ಕಾರಿ ಬಸ್​ ಕೆಟ್ಟಿದ್ದಕ್ಕೆ ಜನರಿಗೆ ತೊಂದರೆ

ಚಿಕ್ಕಮಗಳೂರು: ಎರಡು ಕೆಎಸ್​ಆರ್​ಟಿಸಿ ಬಸ್​ಗಳು ರಸ್ತೆ ಮಧ್ಯೆ ಕೆಟ್ಟು ನಿಂತಿದ್ದರಿಂದ ಚಾರ್ಮಾಡಿ ಘಾಟ್​ನ ಅಣ್ಣಪ್ಪ ಸ್ವಾಮಿ ದೇವಾಲಯದ ಬಳಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಪ್ರವಾಸಿಗರು, ಸ್ಥಳೀಯ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.

ಚಾರ್ಮಾಡಿ ಘಾಟ್​ನ ಅಣ್ಣಪ್ಪ ಸ್ವಾಮಿ ದೇವಾಲಯದ ರಸ್ತೆಯಲ್ಲಿ ಎರಡು ಕೆಎಸ್​ಆರ್​ಟಿಸಿ ಬಸ್​ಗಳು ಕೆಟ್ಟು ನಿಂತಿವೆ. ಇದರಿಂದ ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು ಪ್ರವಾಸಿಗರು, ಸ್ಥಳೀಯ ಪ್ರಯಾಣಿಕರು ತೊಂದರೆಗೆ ಒಳಗಾಗಿ ಮಳೆಯಲ್ಲಿ ಯಾವ ಕಡೆ ಹೋಗಬೇಕು ಎನ್ನುವುದು ಗೊತ್ತಾಗದೆ ಸುಮ್ಮನೆ ಕುಳಿತ್ತಿದ್ದಾರೆ. ಇದು ಚಿಕ್ಕಮಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ಹೆದ್ದಾರಿಯಾಗಿದೆ.

ಇದನ್ನೂ ಓದಿ: ‘ಮೋದಿಗೆ ಯಾರೂ ವೋಟ್ ಹಾಕಬೇಡಿ’.. ಹೀಗೆ ಶಾಲಾ ಮಕ್ಕಳಿಗೆ ಹೇಳಿದ್ದ ಶಿಕ್ಷಕ ಅರೆಸ್ಟ್​.. ಏನಿದು ಕೇಸ್​?

ನಿರಂತರ ಮಳೆಯಿಂದ ಪ್ರವಾಸಿಗರು ಪ್ರಯಾಣಿಕರು ಪರದಾಡಿದ್ದು ಇಂತಹ ಟ್ರಾಫಿಕ್​ನಲ್ಲಿ ಮಂಗಳೂರಿಗೆ ಹೋಗುತ್ತಿದ್ದ ಆ್ಯಂಬುಲೆನ್ಸ್​ವೊಂದು ಸಿಲುಕಿಕೊಂಡಿದ್ದು ಒಳಗಿದ್ದ ರೋಗಿ ನೋವಿನಿಂದ ಬಳಲಿದ್ದಾರೆ. ಈ ಟ್ರಾಫಿಕ್ ಕ್ಲಿಯರ್ ಮಾಡಲು ಬಣಕಲ್ ಪೊಲೀಸರ‌ ಹರಸಾಹಸ ಪಡುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More