/newsfirstlive-kannada/media/post_attachments/wp-content/uploads/2024/05/CKM_GHAT.jpg)
ಚಿಕ್ಕಮಗಳೂರು: ಎರಡು ಕೆಎಸ್​ಆರ್​ಟಿಸಿ ಬಸ್​ಗಳು ರಸ್ತೆ ಮಧ್ಯೆ ಕೆಟ್ಟು ನಿಂತಿದ್ದರಿಂದ ಚಾರ್ಮಾಡಿ ಘಾಟ್​ನ ಅಣ್ಣಪ್ಪ ಸ್ವಾಮಿ ದೇವಾಲಯದ ಬಳಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ಪ್ರವಾಸಿಗರು, ಸ್ಥಳೀಯ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.
ಚಾರ್ಮಾಡಿ ಘಾಟ್​ನ ಅಣ್ಣಪ್ಪ ಸ್ವಾಮಿ ದೇವಾಲಯದ ರಸ್ತೆಯಲ್ಲಿ ಎರಡು ಕೆಎಸ್​ಆರ್​ಟಿಸಿ ಬಸ್​ಗಳು ಕೆಟ್ಟು ನಿಂತಿವೆ. ಇದರಿಂದ ಕಿಲೋ ಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು ಪ್ರವಾಸಿಗರು, ಸ್ಥಳೀಯ ಪ್ರಯಾಣಿಕರು ತೊಂದರೆಗೆ ಒಳಗಾಗಿ ಮಳೆಯಲ್ಲಿ ಯಾವ ಕಡೆ ಹೋಗಬೇಕು ಎನ್ನುವುದು ಗೊತ್ತಾಗದೆ ಸುಮ್ಮನೆ ಕುಳಿತ್ತಿದ್ದಾರೆ. ಇದು ಚಿಕ್ಕಮಗಳೂರು-ಮಂಗಳೂರು ಸಂಪರ್ಕ ಕಲ್ಪಿಸುವ ಹೆದ್ದಾರಿಯಾಗಿದೆ.
/newsfirstlive-kannada/media/post_attachments/wp-content/uploads/2024/05/CKM_GHAT_1.jpg)
ನಿರಂತರ ಮಳೆಯಿಂದ ಪ್ರವಾಸಿಗರು ಪ್ರಯಾಣಿಕರು ಪರದಾಡಿದ್ದು ಇಂತಹ ಟ್ರಾಫಿಕ್​ನಲ್ಲಿ ಮಂಗಳೂರಿಗೆ ಹೋಗುತ್ತಿದ್ದ ಆ್ಯಂಬುಲೆನ್ಸ್​ವೊಂದು ಸಿಲುಕಿಕೊಂಡಿದ್ದು ಒಳಗಿದ್ದ ರೋಗಿ ನೋವಿನಿಂದ ಬಳಲಿದ್ದಾರೆ. ಈ ಟ್ರಾಫಿಕ್ ಕ್ಲಿಯರ್ ಮಾಡಲು ಬಣಕಲ್ ಪೊಲೀಸರ ಹರಸಾಹಸ ಪಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us