ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಯುಕ್ತರ ನೇಮಕ
1988 ಬ್ಯಾಚ್ನ ನಿವೃತ್ತ ಐಎಎಸ್ ಅಧಿಕಾರಿಗಳ ನೇಮಕ ಆಗಿದೆ
ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಯಡವಟ್ಟು ಮಾಡಿಕೊಂಡಿದ್ದಾರೆ. ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ (Gyanesh Kumar) ಮತ್ತು ಬಲ್ವಿಂದರ್ ಸಂಧು (Sukhbir Singh Sandhu) ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಘೋಷಿಸಿದ್ದಾರೆ.
ಚುನಾವಣಾ ಆಯೋಗ ಘೋಷಣೆಗೂ ಮೊದಲೇ ಕಾಂಗ್ರೆಸ್ ನಾಯಕ ಹೇಳಿರೋದು ಚರ್ಚೆಗೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ನಾನು ಮತ್ತು ಅರ್ಜುನ್ ರಾಮ್ ಮೇಘವಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಕಾಂಗ್ರೆಸ್ ನಾಯಕ ತಿಳಿಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗವು ತಯಾರಿ ನಡೆಸುತ್ತಿರುವಾಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ಗೆ ಸಹಾಯ ಮಾಡಲು ಇಬ್ಬರು ಚುನಾವಣಾ ಆಯುಕ್ತರ ಅವಶ್ಯಕತೆ ಇತ್ತು. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜ್ಞಾನೇಶ್ ಕುಮಾರ್ ಮತ್ತು ಬಲ್ವಿಂದರ್ ಸಂಧು ಅವರನ್ನು ಆಯ್ಕೆ ಮಾಡಲಾಗಿದೆ. ಸಂಧು ಮತ್ತು ಶ್ರೀ ಕುಮಾರ್ 1988-ಬ್ಯಾಚ್ನ ನಿವೃತ್ತ ಐಎಎಸ್ ಅಧಿಕಾರಿಗಳಾಗಿದ್ದಾರೆ. ಸಂಧು ಐಎಎಸ್ನ ಉತ್ತರಾಖಂಡ್ ಕೇಡರ್ನಿಂದ ಬಂದಿದ್ದರೆ, ಕುಮಾರ್ ಕೇರಳ ಕೇಡರ್ನಿಂದ ಬಂದವರು.
ಇನ್ನು ಆಯ್ಕೆ ಸಮಿತಿ ಸಭೆಯ ಬಗ್ಗೆಯೂ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಚೌಧರಿ, ಈ ಸಭೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಇರಬೇಕಾಗಿತ್ತು. ಅವರನ್ನು ಬಿಟ್ಟು ಕೇಂದ್ರ ಸರ್ಕಾರ ಸಭೆ ನಡೆಸಿದೆ. ಇಂತಹ ನಿರ್ಧಾರ ಒಳ್ಳೆಯದಲ್ಲ ಎಂದು ಕಿಡಿಕಾರಿದ್ದಾರೆ. ಸಿಇಸಿ ರಾಜೀವ್ ಕುಮಾರ್ ಆಯ್ಕೆ ಸಮಿತಿ ಸಭೆಯಲ್ಲಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಯುಕ್ತರ ನೇಮಕ
1988 ಬ್ಯಾಚ್ನ ನಿವೃತ್ತ ಐಎಎಸ್ ಅಧಿಕಾರಿಗಳ ನೇಮಕ ಆಗಿದೆ
ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಯಡವಟ್ಟು ಮಾಡಿಕೊಂಡಿದ್ದಾರೆ. ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ (Gyanesh Kumar) ಮತ್ತು ಬಲ್ವಿಂದರ್ ಸಂಧು (Sukhbir Singh Sandhu) ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಘೋಷಿಸಿದ್ದಾರೆ.
ಚುನಾವಣಾ ಆಯೋಗ ಘೋಷಣೆಗೂ ಮೊದಲೇ ಕಾಂಗ್ರೆಸ್ ನಾಯಕ ಹೇಳಿರೋದು ಚರ್ಚೆಗೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ನಾನು ಮತ್ತು ಅರ್ಜುನ್ ರಾಮ್ ಮೇಘವಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಕಾಂಗ್ರೆಸ್ ನಾಯಕ ತಿಳಿಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗವು ತಯಾರಿ ನಡೆಸುತ್ತಿರುವಾಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ಗೆ ಸಹಾಯ ಮಾಡಲು ಇಬ್ಬರು ಚುನಾವಣಾ ಆಯುಕ್ತರ ಅವಶ್ಯಕತೆ ಇತ್ತು. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜ್ಞಾನೇಶ್ ಕುಮಾರ್ ಮತ್ತು ಬಲ್ವಿಂದರ್ ಸಂಧು ಅವರನ್ನು ಆಯ್ಕೆ ಮಾಡಲಾಗಿದೆ. ಸಂಧು ಮತ್ತು ಶ್ರೀ ಕುಮಾರ್ 1988-ಬ್ಯಾಚ್ನ ನಿವೃತ್ತ ಐಎಎಸ್ ಅಧಿಕಾರಿಗಳಾಗಿದ್ದಾರೆ. ಸಂಧು ಐಎಎಸ್ನ ಉತ್ತರಾಖಂಡ್ ಕೇಡರ್ನಿಂದ ಬಂದಿದ್ದರೆ, ಕುಮಾರ್ ಕೇರಳ ಕೇಡರ್ನಿಂದ ಬಂದವರು.
ಇನ್ನು ಆಯ್ಕೆ ಸಮಿತಿ ಸಭೆಯ ಬಗ್ಗೆಯೂ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಚೌಧರಿ, ಈ ಸಭೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಇರಬೇಕಾಗಿತ್ತು. ಅವರನ್ನು ಬಿಟ್ಟು ಕೇಂದ್ರ ಸರ್ಕಾರ ಸಭೆ ನಡೆಸಿದೆ. ಇಂತಹ ನಿರ್ಧಾರ ಒಳ್ಳೆಯದಲ್ಲ ಎಂದು ಕಿಡಿಕಾರಿದ್ದಾರೆ. ಸಿಇಸಿ ರಾಜೀವ್ ಕುಮಾರ್ ಆಯ್ಕೆ ಸಮಿತಿ ಸಭೆಯಲ್ಲಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ