ಕಲುಷಿತ ನೀರು ಸೇವಿಸಿದ್ದ ಹಲವು ಮಂದಿಗೆ ವಾಂತಿ-ಭೇದಿ
ಮಕ್ಕಳು, ವೃದ್ಧರು ಸೇರಿ 21ಕ್ಕೂ ಹೆಚ್ಚು ಸ್ಥಳೀಯರು ಅಸ್ವಸ್ಥ
ಸರ್ಕಾರಿ ಆಸ್ಪತ್ರೆಯಲ್ಲಿ ಅಸ್ವಸ್ಥರಾದವರಿಗೆ ಸಂಪೂರ್ಣ ಚಿಕಿತ್ಸೆ
ಬೀದರ್: ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಔರಾದ್ ತಾಲೂಕಿನ ಕರಕ್ಯಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ಸಿಬ್ಬಂದಿ ಅಜಾಗರೂಕತೆ ಕಾರಣದಿಂದಾಗಿ ಈ ದುರಂತ ಸಂಭವಿಸಿದೆ.
ಇನ್ನು, ಗ್ರಾಮ ಪಂಚಾಯಿತಿಯಿಂದ ಪೂರೈಕೆಯಾಗುವ ನೀರು ಸೇವಿಸಿದ ಕರಕ್ಯಾಳ ಗ್ರಾಮಸ್ಥರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದೆ. ಇದರ ಪರಿಣಾಮ ಮಕ್ಕಳು, ವೃದ್ಧರೂ ಸೇರಿದಂತೆ 21 ಮಂದಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ.
ಸದ್ಯ ಅಸ್ವಸ್ಥರಾದ ಎಲ್ಲರನ್ನು ಔರಾದ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗ್ರಾಮದ ಪ್ರತಿಯೊಬ್ಬರಿಗೂ ಆರೋಗ್ಯ ಇಲಾಖೆ ಚಿಕಿತ್ಸೆ ಕೊಡುತ್ತಿದೆ. ಕಲುಷಿತಿ ನೀರು ಪೂರೈಕೆ ಮಾಡಿದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಲುಷಿತ ನೀರು ಸೇವಿಸಿದ್ದ ಹಲವು ಮಂದಿಗೆ ವಾಂತಿ-ಭೇದಿ
ಮಕ್ಕಳು, ವೃದ್ಧರು ಸೇರಿ 21ಕ್ಕೂ ಹೆಚ್ಚು ಸ್ಥಳೀಯರು ಅಸ್ವಸ್ಥ
ಸರ್ಕಾರಿ ಆಸ್ಪತ್ರೆಯಲ್ಲಿ ಅಸ್ವಸ್ಥರಾದವರಿಗೆ ಸಂಪೂರ್ಣ ಚಿಕಿತ್ಸೆ
ಬೀದರ್: ಕಲುಷಿತ ನೀರು ಸೇವಿಸಿ 20ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಔರಾದ್ ತಾಲೂಕಿನ ಕರಕ್ಯಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ಸಿಬ್ಬಂದಿ ಅಜಾಗರೂಕತೆ ಕಾರಣದಿಂದಾಗಿ ಈ ದುರಂತ ಸಂಭವಿಸಿದೆ.
ಇನ್ನು, ಗ್ರಾಮ ಪಂಚಾಯಿತಿಯಿಂದ ಪೂರೈಕೆಯಾಗುವ ನೀರು ಸೇವಿಸಿದ ಕರಕ್ಯಾಳ ಗ್ರಾಮಸ್ಥರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದೆ. ಇದರ ಪರಿಣಾಮ ಮಕ್ಕಳು, ವೃದ್ಧರೂ ಸೇರಿದಂತೆ 21 ಮಂದಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ.
ಸದ್ಯ ಅಸ್ವಸ್ಥರಾದ ಎಲ್ಲರನ್ನು ಔರಾದ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗ್ರಾಮದ ಪ್ರತಿಯೊಬ್ಬರಿಗೂ ಆರೋಗ್ಯ ಇಲಾಖೆ ಚಿಕಿತ್ಸೆ ಕೊಡುತ್ತಿದೆ. ಕಲುಷಿತಿ ನೀರು ಪೂರೈಕೆ ಮಾಡಿದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ