ಹಾಸನ: ಜಿಲ್ಲೆಯಲ್ಲಿ ಅತಿವೃಷ್ಟಿಗೆ ಬಿಡುಗಡೆಯಾದ ಹಣ ಹಂಚಿಕೆ ಬಗ್ಗೆ ಶಾಸಕ ಪ್ರೀತಂಗೌಡ ಹಾಗೂ ಶಾಸಕ ಶಿವಲಿಂಗೇಗೌಡರ ನಡುವೆ ತೀವ್ರ ವಾಗ್ವಾದ ನಡೆದಿದೆ.
ಜಿಲ್ಲಾ ಪಂಚಾಯ್ತಿನಲ್ಲಿ ನಡೆಯುತ್ತಿರು ಕೆಐಡಿಬಿ ಸಭೆಯಲ್ಲಿ ಶಾಸಕ ಶಿವಲಿಂಗೇಗೌಡ ನೀನು ತಂದಿರೋದು ಸರ್ಕಾರದ ಅನುದಾನ ಅದು ಎಲ್ಲಾ ಕ್ಷೇತ್ರಕ್ಕೆ ಹಂಚಿಕೆಯಾಗಬೇಕು ಎಂದು ಶಾಸಕ ಪ್ರೀತಂಗೌಡ ವಿರುದ್ಧ ಗುಡುಗಿದ್ದಾರೆ. ಹಾಗೂ ಅನುದಾನಗಳ ಹಂಚಿಕೆಯಲ್ಲಿ ಅರಸೀಕೆರೆ ಹಾಗೂ ಚನ್ನರಾಯಪಟ್ಟಣ ಕ್ಷೇತ್ರಗಳನ್ನ ಕಡೆಗಣಿಸಲಾಗಿದೆ ಎಂದು ಟೇಬಲ್ ಕುಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಲಿಂಗೇಗೌಡ ವರ್ತನೆಗೆ ತಿರುಗೇಟು ನೀಡಿದ ಪ್ರೀತಂಗೌಡ ನೀವು ಟೇಬಲ್ ಬಡಿದ್ರೆ ನಮಗೂ ಬಡಿಯೋಕೆ ಬರುತ್ತೆ ಸುಮ್ಮನಿರಿ. ನಮ್ಮ ಕ್ಷೇತ್ರದ ಬಗ್ಗೆ ಮಾತಾಡೋಕೆ ನೀವ್ಯಾರು, ನಮ್ಮ ಸರ್ಕಾರ, ನಮ್ಮ ಸಿಎಂ ನಮಗೆ ಅನುದಾನ ಕೊಟ್ಟಿದ್ದಾರೆಂದಿದ್ದಾರೆ ಎಂದು ಕಿಡಿಕಾರಿದ್ದಾರೆ. ಈ ವೇಳೆ ಮಧ್ಯ ಪ್ರವೇಶಿಸಿದ ಉಸ್ತುವಾರಿ ಸಚಿವ ಗೋಪಾಲಯ್ಯ ಇಬ್ಬರೂ ಶಾಸಕರನ್ನು ಸಮಾಧಾನ ಪಡಿಸಿದ್ದಾರೆ ಎನ್ನಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post