ಬೆಂಗಳೂರು: ಕಾಂಗ್ರೆಸ್ ಚಿಹ್ನೆ ಬಗ್ಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದ ಚಿಹ್ನೆಯ ಟವೆಲ್ಗೆ ಈಗ ವ್ಯಾಲ್ಯೂ ಇಲ್ಲ. ಆದ್ದರಿಂದಲೇ ಕಾಂಗ್ರೆಸ್ ನಾಯಕರು ಹಸಿರು ಟವೆಲ್ ಹಾಕಿಕೊಂಡು ಬೀದಿಗೆ ಬಂದಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕೋಲಾರದಲ್ಲಿ ಟೀಕಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್.. ‘ಪಾಪ ಏನು ಮಾಡ್ತೀರಿ.. ಈ ದೇಶದ ಪ್ರಧಾನಿ ಮಾಡಿದ್ದು ಆ ಶಾಲು, ಕುಮಾರಸ್ವಾಮಿ ಅವರನ್ನ ಮುಖ್ಯಮಂತ್ರಿ ಮಾಡಿದ್ದು ಆ ಶಾಲು. ಈಗ ಕುಮಾರಸ್ವಾಮಿ ಕಾಂಗ್ರೆಸ್ ಶಾಲಿನ ವಿರುದ್ಧ ಮಾತನಾಡಿದ್ದಾರೆ. ಇದಕ್ಕೆ ಜನರು ತೀರ್ಮಾನ ಮಾಡ್ತಾರೆ’ ಎಂದು ತಿರುಗೇಟು ನೀಡಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post