ಬೆಂಗಳೂರು: ಕೃಷಿ ಸಚಿವ ಬಿ.ಸಿ ಪಾಟೀಲ್, ಕೊರೊನಾ ಲಸಿಕೆ ಪಡೆಯಲು ಆಸ್ಪತ್ರೆಗೆ ಹೋಗುವ ಬದಲು ತಮ್ಮ ಮನೆಗೇ ವೈದ್ಯರನ್ನ ಕರೆಸಿಕೊಂಡು ವ್ಯಾಕ್ಸಿನ್ ಪಡೆದಿರೋದು ವಿವಾದಕ್ಕೀಡಾಗಿದೆ.
ಈ ಕುರಿತು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಈ ಸರ್ಕಾರದಲ್ಲಿ ಯಾರು ಏನ್ ಬೇಕಾದ್ರೂ ಮಾಡಬಹುದು ಬನ್ರೀ.. ಅಂತ ಹರಿಹಾಯ್ದಿದ್ದಾರೆ.
ಇದನ್ನೂ ಓದಿ: ಪ್ರಧಾನಿಯೇ ಆಸ್ಪತ್ರೆಗೆ ಹೋಗಿದ್ರು; ಆದ್ರೆ ಮನೆಯಲ್ಲೇ ಬಿ.ಸಿ ಪಾಟೀಲ್ ಮತ್ತು ಪತ್ನಿಗೆ ಲಸಿಕೆ
ನಿಯಮಗಳ ಅನ್ವಯ ಎಲ್ಲರೂ ಸರ್ಕಾರಿ ಆಸ್ಪತ್ರೆ ಅಥವಾ ಖಾಸಗಿ ಆಸ್ಪತ್ರೆಗಳ ಕೊರೊನಾ ಲಸಿಕೆ ಕೇಂದ್ರಗಳಿಗೆ ತೆರಳಿ ವ್ಯಾಕ್ಸಿನ್ ಪಡೆಯಬೇಕು. ಆದರೆ ಇಂದು ಬಿ.ಸಿ.ಪಾಟೀಲ್ ಅವರು ತಮ್ಮ ಪತ್ನಿ ವನಜಾ ಪಾಟೀಲ್ ಅವರೊಂದಿಗೆ ಮನೆಯಲ್ಲಿಯೇ ಕುಳಿತುಕೊಂಡು ಲಸಿಕೆ ಪಡೆದಿದ್ದಾರೆ. ಹಿರೇಕೆರೂರು ಆಸ್ಪತ್ರೆಯ ಸಿಬ್ಬಂದಿ ಸಚಿವರ ನಿವಾಸಕ್ಕೆ ಆಗಮಿಸಿ ಲಸಿಕೆ ನೀಡಿದ್ದಾರೆ. ಸಚಿವರ ನಡೆಗೆ ಹಲವಾರು ಮಂದಿ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕಿದ್ದಾರೆ.
Took the #COVID19Vaccine with my wife, at my Hirekerur house from the Govt. doctors today.
While 'Made In India' vaccines are being immensely appreciated by many countries, some vested interest groups are spreading false information about the vaccines.@DDChandanaNews | @DHFWKA pic.twitter.com/yE6fYZTddJ
— Kourava B.C.Patil (@bcpatilkourava) March 2, 2021
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post