ಪಶ್ಚಿಮ ಬಂಗಾಳ: ವಿಧಾನಸಭಾ ಚುನಾವಣೆ ಹಿನ್ನೆಲೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ನಂದಿ ಗ್ರಾಮದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ವಿಶೇಷ ಅಂದ್ರೆ ಒಂದು ಕಾಲದ ತಮ್ಮ ಆಪ್ತ ಮತ್ತು ಈಗ ಬಿಜೆಪಿ ಸೇರಿರುವ ಸುವೆಂದು ಅಧಿಕಾರಿ ವಿರುದ್ಧವೇ ಮಮತಾ ಸ್ಪರ್ಧಿಸಲಿದ್ದು.. ಇದು ಮಾಡು ಇಲ್ಲವೇ ಮಡಿ ಅನ್ನೋವಂಥ ಸನ್ನಿವೇಶ ನಿರ್ಮಾಣವಾಗಿದೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಶಿವನ ದೇವಾಲಯಕ್ಕೆ ತೆರಳಿ ಶಿವನಿಗೆ ಪೂಜೆ ಸಲ್ಲಿಸಿ ನಂತರ ಪಾದಯಾತ್ರೆ ಮೂಲಕ ದೊಡ್ಡಱಲಿ ಮಾಡುತ್ತಿದ್ದಾರೆ. ಸದ್ಯ ಚುನಾವಣೆಯಲ್ಲಿ ಹಿಂದೂ ಟ್ರಂಪ್ ಕಾರ್ಡ್ ಪ್ಲೇ ಮಾಡುತ್ತಿರುವ ಮಮತಾ ಪಾದಯಾತ್ರೆ ಮೂಲಕ ತೆರಳಿ ತಮ್ಮ ಶಕ್ತಿ ಪ್ರದರ್ಶನ ದೊಂದಿಗೆ ನಾಮಪತ್ರ ಸಲ್ಲಿಸಲಿದ್ದಾರೆ.
ಇನ್ನು ನಾಡಿದ್ದು ಅಂದ್ರೆ 12 ನೇ ತಾರೀಖಿನಂದು ಸುವೆಂದು ಅಧಿಕಾರಿ ಕೂಡ ನಂದಿ ಗ್ರಾಮದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಅವರೊಂದಿಗೆ ಕೇಂದ್ರ ಸಚಿವರಾದ ಸ್ಮೃತಿ ಇರಾನಿ, ಧರ್ಮೇಂದ್ರ ಪ್ರಧಾನ್ ಕೂಡ ಉಪಸ್ಥಿತರಿಲರಿದ್ದಾರೆ.. ವಿಶೇಷ ಅಂದ್ರೆ, ಉತ್ತರ ಪ್ರದೇಶದಲ್ಲಿ ಅಮೇಥಿಯಲ್ಲಿ ರಾಹುಲ್ ಗಾಂಧಿಯನ್ನೇ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೋಲಿಸಿ ಜಿಯಾಂಟ್ ಸ್ಲೇಯರ್ ಅನ್ನೋ ಹೆಸರನ್ನೂ ಗಳಿಸಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post