ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನ ಮಾಜಿ ಸಚಿವ ಜನಾರ್ದನ ರೆಡ್ಡಿ ಪಡೆದುಕೊಂಡರು.
ಕಂಠೀರವ ಸ್ಟೇಡಿಯಂಗೆ ಆಗಮಿಸಿ ಪುನೀತ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡರು. ಇವರಿಗೆ ಮಾಜಿ ಸಚಿವ ಸೋಮಶೇಖರ್ ರೆಡ್ಡಿ ಸಾತ್ ನೀಡಿದರು. ಹಠಾತ್ ಕಾರ್ಡಿಯಾಕ್ ಅರೆಸ್ಟ್ ಆದ ಪರಿಣಾಮ ನಿನ್ನೆ ವಿಕ್ರಂ ಆಸ್ಪತ್ರೆಯಲ್ಲಿ ಪುನೀತ್ ರಾಜ್ಕುಮಾರ್ ವಿಧಿವಶರಾಗಿದ್ದರು.
ಇನ್ನು ಪುನೀತ್ ರಾಜ್ಕುಮಾರ್ ಅವರ ಅಂತಿಮ ದರ್ಶನ ಪಡೆಯಲು ಅಭಿಮಾನಿಗಳು ಸಾಗರೋಪಾದಿಯಲ್ಲಿ ಕಂಠೀರವ ಸ್ಟೇಡಿಯಂನತ್ತ ಆಗಮಿಸುತ್ತಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post