ಉಡುಪಿ: ರೈಲು ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರು ಗ್ರಾಮದ ಕುಡ್ತಿಮಾರು ಎಂಬಲ್ಲಿ ನಡೆದಿದೆ. ಫಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಹತ್ತಿರದ ನಿವಾಸಿ ಅಬ್ದುಲ್ ರಜಾಕ್ (48) ಮೃತ ದುರ್ದೈವಿ.
ರೈಲ್ವೇ ಹಳಿಯಲ್ಲಿ ನಡೆದುಕೊಂಡು ಹೋಗುವಾಗ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುವ ರೈಲು ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ರಜಾಕ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post