ಭಾರತ-ಶ್ರೀಲಂಕಾ ಸರಣಿಗಾಗಿ ಟೀಮ್ ಇಂಡಿಯಾ ಪ್ರಕಟವಾಗಿದೆ. ಸೀಮಿತ ಓವರ್ಗಳ ನಾಯಕ ರೋಹಿತ್ ಶರ್ಮಾಗೇ ಟೆಸ್ಟ್ ತಂಡದ ಜವಾಬ್ದಾರಿಯನ್ನೂ ವಹಿಸಲಾಗಿದೆ. ಆದರೆ KL ರಾಹುಲ್ ಅಲಭ್ಯತೆಯಲ್ಲಿ ಜಸ್ಪ್ರಿತ್ ಬೂಮ್ರಾಗೆ ಉಪನಾಯಕನ ಪಟ್ಟ ಕಟ್ಟಲಾಗಿದೆ.
ಸದ್ಯ ರಾಹುಲ್ ಗಾಯಗೊಂಡಿದ್ದು ಲಂಕಾ ಸರಣಿಯಿಂದ ಹೊರಗುಳಿದಿದ್ದಾರೆ. ಆದ್ದರಿಂದ ಲಂಕಾ ವಿರುದ್ಧದ ಟಿ20 ಸರಣಿ ಹಾಗೂ ಟೆಸ್ಟ್ ಸರಣಿಗೆ ಬೂಮ್ರಾರನ್ನ ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಜೊತೆಗೆ ಹೊಸ ಮುಖಗಳಿಗೂ ಮಣೆ ಹಾಕಲಾಗಿದೆ. ಇನ್ನು ಸಂಜು ಸ್ಯಾಮ್ಸನ್ ಟಿ20 ತಂಡಕ್ಕೆ ಕಂಬ್ಯಾಕ್ ಮಾಡಿದ್ದಾರೆ.
ಇನ್ನು ಗಾಯದಿಂದ ತಂಡದಿಂದ ಹೊರಗುಳಿದಿದ್ದ ರವೀಂದ್ರ ಜಡೇಜಾ ತಂಡಕ್ಕೆ ಮರಳಿದ್ದಾರೆ. ಹಾಗೆಯೇ ವಿರಾಟ್ ಕೊಹ್ಲಿ ಮತ್ತು ರಿಷಭ್ ಪಂತ್ಗೆ ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿದ್ದಾರೆ. ಆದ್ರೆ ಅಜಿಂಕ್ಯ ರಹಾನೆ, ಚೇತೇಶ್ವರ್ ಪೂಜಾರ, ವೃದ್ಧಿಮಾನ್ ಸಾಹ ಮತ್ತು ಇಶಾಂತ್ರನ್ನ ಡ್ರಾಪ್ ಮಾಡಲಾಗಿದೆ.
ಶ್ರೀಲಂಕಾ ವಿರುದ್ದದ ಸರಣಿ ವೇಳಾಪಟ್ಟಿ
- ಮೊದಲ ಟಿ20: ಫೆ.24 (ಲಕ್ನೋ)
- ಎರಡನೇ ಟಿ20: ಫೆ.26 (ಧರ್ಮಶಾಲಾ)
- ಮೂರನೇ ಟಿ20: ಫೆ.27 (ಧರ್ಮಶಾಲಾ)
- 1ನೇ ಟೆಸ್ಟ್: 4 ರಿಂದ 8 ಮಾರ್ಚ್ (ಮೊಹಾಲಿ)
- 2ನೇ ಟೆಸ್ಟ್ (ಡೇ ಆ್ಯಂಡ್ ನೈಟ್): ಮಾರ್ಚ್ 12-16 (ಬೆಂಗಳೂರು)
ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಜುವೇಂದ್ರ ಚಹಲ್, ಕುಲ್ದೀಪ್ ಯಾದವ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್, ರವಿ ಬಿಷ್ಣೋಯ್, ಅವೇಶ್ ಖಾನ್
ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಪ್ರಿಯಾಂಕ್ ಪಾಂಚಲ್, ಮಯಾಂಕ್ ಅಗರ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಭ್ ಪಂತ್(ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಶುಭ್ಮನ್ ಗಿಲ್, ಆರ್ ಅಶ್ವಿನ್, ರವೀಂದ್ರ ಜಡೇಜಾ, ಜಯಂತ್ ಯಾದವ್, ಕುಲ್ದೀಪ್ ಯಾದವ್, ಸೌರಭ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ , ಉಮೇಶ್ ಯಾದವ್.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post