ಚಿಕ್ಕೋಡಿ: ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ.
ಬಸವರಾಜ್ ಮಾಳಿ (23), ಪ್ರವೀಣ್ ಸನದಿ (24) ಹಾಗೂ ಮೆಹಬೂಬ ಶೇಗಡಿ (23) ಮೃತ ದುರ್ದೈವಿಗಳು. ಮೃತರೆಲ್ಲ ಸಂಕೇಶ್ವರ ಪಟ್ಟಣದ ನಿವಾಸಿಗಳು ಎನ್ನಲಾಗಿದೆ. ಗಾಯಗೊಂಡಿರುವ ಮಲಿಕ್ ಜಮಾದಾರ್ ಎಂಬ ಯುವಕನ ಸ್ಥಿತಿ ಚಿಂತಾಜನಕವಾಗಿದೆ.
ಗಾಯಾಳುವಿಗೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದೇ ಬೈಕಿನಲ್ಲಿ ನಾಲ್ಕು ಜನ ಪ್ರಯಾಣಿಸುತ್ತಿದ್ದ ಪರಿಣಾಮ ಅಪಘಾತ ಸಂಭವಿಸಿದೆ. ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಪಕ್ಕದ ಗುಂಡಿಗೆ ಬಿದ್ದಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post