ದಾವಣಗೆರೆ: ಟ್ರ್ಯಾಕ್ಟರ್ ಹರಿದು ಪಾದಚಾರಿ ಸಾವನ್ನಪ್ಪಿದ ಘಟನೆ ದಾವಣಗೆರೆಯ ಹನುಮಂತಾ ಪುರ ರಸ್ತೆಯಲ್ಲಿ ನಡೆದಿದೆ.
ಜಗಳೂರು ತಾಲೂಕಿನ ಅಣಬೂರು ಗೊಲ್ಲರಹಟ್ಟಿ ರಾಜಪ್ಪ ಮೃತ ದುರ್ದೈವಿಯಾಗಿದ್ದಾರೆ. ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುವಾಗ ಟ್ರ್ಯಾಕ್ಟರ್ ಗುದ್ದಿದ ಪರಿಣಾಮ ರಾಜಪ್ಪ ಸಾವನ್ನಪ್ಪಿದ್ದಾರೆ. ತಾಯಿಯನ್ನ ಆಸ್ಪತ್ರೆಗೆ ಸೇರಿಸಿದ್ದ ರಾಜಪ್ಪ, ಬೆಳಗ್ಗೆ ಆಸ್ಪತ್ರೆಯಿಂದ ಹೊರೆಗೆ ಬಂದ ವೇಳೆ ಈ ದುರಂತ ಸಂಭವಿಸಿದೆ.
ಅಪಘಾತದ ಬಳಿಕ ಟ್ರ್ಯಾಕ್ಟರ್ ಸಮೇತ ಚಾಲಕ ಪರಾರಿಯಾಗಿದ್ದಾನೆ. ಇನ್ನು ಈ ಘಟನೆ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post