ಬಳ್ಳಾರಿ: ಪಾದಚಾರಿ ಮೇಲೆ ಟ್ರ್ಯಾಕ್ಟರ್ ಹರಿದು ವೃದ್ಧೆ ಸಾವನ್ನಪ್ಪಿರುವ ಘಟನೆ ಸಿರುಗುಪ್ಪ ತಾಲೂಕಿನ ಬೃಂದಾವನ ಕ್ಯಾಂಪಿನ ಬಳಿ ನಡೆದಿದೆ.
ಬಾಗೇವಾಡಿ ಗ್ರಾಮದ ಫಕೀರಮ್ಮಾ( 65) ಮೃತ ವೃದ್ಧೆ. ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಫಕೀರಮ್ಮಾ ಮೇಲೆ ಟ್ರ್ಯಾಕ್ಟರ್ ನುಗ್ಗಿದೆ. ಬಾಲಕನ ನಿಯಂತ್ರಣ ತಪ್ಪಿ ವೃದ್ಧೆ ಮೇಲೆ ಟ್ಯಾಕ್ಟರ್ ಹರಿದ ಪರಿಣಾಮ ಅನಾಹುತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಸಿರುಗುಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಿರುಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರಂತ ನಡೆದಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post