ಬಳ್ಳಾರಿ: ಜನಾರ್ದನ ರೆಡ್ಡಿ ಅತ್ಯಾಪ್ತ ಅಲಿ ಖಾನ್ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ನಿನ್ನೆ ಇಫ್ತಿಯಾರ್ ಕೂಟ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜನಾರ್ಧನ್ ರೆಡ್ಡಿ ಆಪ್ತ ಗೆಳೆಯ ಸಚಿವ ಶ್ರೀರಾಮುಲು ಹಾಗೂ ಸೋಮಶೇಖರ್ ರೆಡ್ಡಿ ಕೂಡ ಭಾಗಿಯಾಗಿದ್ದರು.
ಈ ಮೂಲಕ ಮುಂಬರುವ ಚುನಾವಣೆಯಲ್ಲಿ ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿನ ಸ್ಪರ್ಧೆಯಲ್ಲಿ ಸಚಿವ ಶ್ರೀರಾಮುಲು ಗೆಲುವಿಗೆ ಮುಸ್ಲಿಂ ಒಲೈಕೆಗಾಗಿ ಜನಾರ್ಧನ ರೆಡ್ಡಿ ಮುಂದಾಗಿದ್ದಾರೆ. ಇನ್ನು ಬಳ್ಳಾರಿಯ ಕೌಲ್ ಬಜಾರ್ನಲ್ಲಿ ಮುಸ್ಲಿಂ ಮತದಾರರು ಹೆಚ್ಚಾಗಿದ್ದು, ಇದೀಗ ಅವರ ಮನವೊಲಿಕೆಗೆ ಸಚಿವ ಶ್ರೀರಾಮುಲು ಮುಂದಾಗಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post