ಕಲಬುರಗಿ: ಕಾಂಗ್ರೆಸ್ ಮಾಜಿ ಸಂಸದೆ, ಮೋಹಕ ತಾರೆ ನಟಿ ರಮ್ಯಾರ ಟ್ವೀಟ್ ವಿಚಾರಕ್ಕೆ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರ ಮನೆ ದೋಸೆ ತೂತೆ ಇರುತ್ತೆ. ರಮ್ಯಾ ಅವರದ್ದು ಪಕ್ಷಕ್ಕೆ ತಮ್ಮದೇ ಆದ ಕೊಡುಗೆ ಇದೆ. ಸಂಸದರಾಗಿ ಕೆಲಸ ಮಾಡಿದ್ದಾರೆ. ರಾಷ್ಟ್ರ ಮಟ್ಟದಲ್ಲಿ ಕೆಲಸ ಮಾಡಿದ್ದಾರೆ. ಬಿಜೆಪಿ ನಾಯಕರೇ ನಿಮ್ಮ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದೆ ಅದನ್ನ ನೋಡಿಕೊಳ್ಳಿ. ಬಿಜೆಪಿ ಅವರು ನಮ್ಮ ಬಗ್ಗೆ ಚಿಂತೆ ಮಾಡೋದನ್ನ ಕಡಿಮೆ ಮಾಡಲಿ ಎಂದು ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post