/newsfirstlive-kannada/media/post_attachments/wp-content/uploads/2024/01/Death0.jpg)
ರಾಯಚೂರು: ಶಾರ್ಟ್ ಸರ್ಕ್ಯೂಟ್ನಿಂದ ವ್ಯಕ್ತಿ ಸಾವನ್ನಪ್ಪಿರೋ ಘಟನೆ ರಾಯಚೂರಿನಲ್ಲಿ ನಡೆದಿದೆ. ನಗರದ IDSMT ಲೇಔಟ್ನಲ್ಲಿ ಈ ದುರಂತ ಸಂಭವಿಸಿದ್ದು, ಕಟ್ಟಡ ಕಟ್ಟುವಾಗ ವಿದ್ಯುತ್ ಪ್ರವಹಿಸಿ ವ್ಯಕ್ತಿ ಅಸುನೀಗಿದ್ದಾನೆ.
ಇನ್ನು, ಹೊರ ರಾಜ್ಯದ ಕಟ್ಟಡ ಕಾರ್ಮಿಕ ಹನುಮೇಶ್ (26) ಎಂಬಾತ ಮೃತ ದುರ್ದೈವಿ. ಮತ್ತೋರ್ವ ಗಾಯಾಳು ರಮೇಶ್ ನವೀನ್ ಎಂಬುವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸಂಬಂಧ ಸದರಬಜಾರ್ ಪೊಲೀಸ್ ಠಾಣೆ ಕೇಸ್ ದಾಖಲಾಗಿದೆ. ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆಗೆ ಮುಂದಾಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ