ಕೊಪ್ಪಳ: ಬೈಕ್, ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ತಂದೆ ಹಾಗೂ ಮಗ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಇಂದರಗಿ ಗ್ರಾಮದ ಬಳಿ ನಡೆದಿದೆ. ಹುಲ್ಲೇಶಪ್ಪ (38), ಮಂಜುನಾಥ (10) ಮೃತ ದುರ್ದೈವಿಗಳು.
ಬೈಕ್ ಮೇಲೆ ಲಾರಿ ಹರಿದ ಪರಿಣಾಮ ಸ್ಥಳದಲ್ಲೇ ತಂದೆ, ಮಗ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಪತ್ನಿ ಮತ್ತು ಮತ್ತೋರ್ವ ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರು ಶಹಾಪುರ ಗ್ರಾಮಕ್ಕೆ ಸೇರಿದವರಾಗಿದ್ದಾರೆ. ದೇವಸ್ಥಾನಕ್ಕೆ ಹೋಗಿ ಮರಳಿ ಗ್ರಾಮಕ್ಕೆ ಬರುವಾಗ ದುರ್ಘಟನೆ ಸಂಭವಿಸಿದೆ.
ಸದ್ಯ ಸ್ಥಳಕ್ಕೆ ಮುನಿರಾಬಾದ್ ಪೊಲೀಸ್ ಅಧಿಕಾರಿಗಳು ಭೇಟಿ ನೀಟಿ ಪರಿಶೀಲನೆ ನಡೆಸುತ್ತಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post