ಕೊಡಗು: ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಕುಶಾಲನಗರ ಸಮೀಪದ ಗುಡ್ಡೆಹೊಸೂರು ಬಳಿ ನಡೆದಿದೆ.
ಮಡಿಕೇರಿ-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಅಪಘಾತ ಸಂಭವಿಸಿದೆ. ಬೈಕ್-ಕಾರ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಚಿನ್ (23), ಹಿಂಬದಿ ಸವಾರ ಪೊನ್ನಪ್ಪ (28) ಸಾವನ್ನಪ್ಪಿದ್ದಾರೆ. ಪೊನ್ನಪ್ಪ ಬಸವನಹಳ್ಳಿ ನಿವಾಸಿ, ಸಚಿನ್ ಕೈಕೇರಿ ನಿವಾಸಿ ಎಂದು ತಿಳಿದುಬಂದಿದೆ. ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post