ರಾಯಚೂರು: ಶಾಲಾ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿರುವ ಘಟನೆ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಅದೃಷ್ಟವಶಾತ್ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದು, ಒರ್ವ ವಿದ್ಯಾರ್ಥಿಗೆ ಗಂಭೀರವಾಗಿ ಗಾಯವಾಗಿದೆ.
ರಾಮರಡ್ಡಿ ಕ್ಯಾಂಪ್ ಅರುಣೋದಯನಿಂದ ಮಕ್ಕಳನ್ನ ಕರೆ ತರುತಿದ್ದ ವೇಳೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಸರಿಯಾಗಿ ವಾಹನ ನಿರ್ವಹಣೆ ಮಾಡದಿರುವುದರಿಂದ ಈ ರೀತಿಯ ಅವಘಡ ಸಂಭಸಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ. ಇನ್ನು ಶಾಲಾ ಬಸ್ಗೆ ಯಾವುದೇ ರೀತಿಯ ದಾಖಲೆಗಳು ಇಲ್ಲದ ಬಗ್ಗೆಯೂ ಆರೋಪ ಕೇಳಿ ಬಂದಿದೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post