ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಗಡಿಭಾಗದ ಉಂಬ್ಳೆಬೈಲು ಬಳಿ ರಸ್ತೆ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗದಿಂದ ಎನ್.ಆರ್.ಪುರ-ಕೊಪ್ಪ ಕಡೆಗೆ ಹೋಗುವ ಖಾಸಗಿ ಹಾಗೂ ಎನ್ಆರ್ಪುರದಿಂದ ಶಿವಮೊಗ್ಗಕ್ಕೆ ಬರುವ ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕಿಯಾಗಿದೆ.
ಉಂಬ್ಳೆಬೈಲು ಗ್ರಾಮ ಪಂಚಾಯಿತಿಯ ತೋಟದಕೆರೆ ಕ್ರಾಸ್ ಬಳಿ ಮುಖಾಮುಖಿಯಾಗಿದೆ. ಪ್ರಯಾಣಿಕರಿಗೆ ತುಂಬಾ ಪೆಟ್ಟಾಗಿ ಶಿವಮೊಗ್ಗದ ಮೆಗ್ಗಾನ್ ಹಾಸ್ಪಿಟಲ್ ಹಾಗೂ ಅಶೋಕ ಸಂಜೀವಿನಿ ಹಾಸ್ಪಿಟಲ್ಗೆ ದಾಖಲಿಸಲಾಗಿದೆ.
ಎರಡೂ ಬಸ್ನಲ್ಲಿದ್ದ 60ಕ್ಕೂ ಹೆಚ್ಚು ಪ್ರಯಾಣಿಕರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ. ಬಹುತೇಕ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post