ಕೊಪ್ಪಳ: ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟರೋ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ತೇಜಸ್ವಿ ಶ್ರೀ (23) ಮೃತ ದುರ್ದೈವಿ. ಮೃತ ವಿದ್ಯಾರ್ಥಿನಿಯು ಬಳ್ಳಾರಿಯ ಸಾಹಿತಿ ವಿನೋದ ಕರ್ಣಂ ಅವರ ಪುತ್ರಿಯಾಗಿದ್ದು, ಕೊಪ್ಪಳದ ಕಿಡಿದಾಳ ರೈಲ್ವೆಗೇಟ್ ಬಳಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಸ್ಥಳೀಯರು ಗಾಯಗೊಂಡಿದ್ದ ತೇಜಸ್ವಿ ಶ್ರೀಯನ್ನು ನಿನ್ನೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ತೇಜಸ್ವಿ ಶ್ರೀ ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿನಿ ಸಾವಿನ ಸುತ್ತಾ ಹಲವು ಅನುಮಾನಗಳು ಮೂಡಿದ್ದು, ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post