ಬಳ್ಳಾರಿ: ಸಾರಿಗೆ ಬಸ್ ಬ್ರೇಕ್ ಫೇಲ್ ಆಗಿ ಗದ್ದೆಗೆ ಪಲ್ಟಿಯಾಗಿ 8 ಪ್ರಯಾಣಿಕರು ಗಾಯಗೊಂಡಿರೋ ಘಟನೆ ಸಿರಗುಪ್ಪ ತಾಲೂಕಿನ ಬೈರಾಪುರ ಕ್ರಾಸ ಬಳಿ ನಡೆದಿದೆ.
ಇನ್ನು, ಸಾರಿಗೆ ಬಸ್ ಬ್ರೇಕ್ ಫೇಲ್ ಆಗಿ ಈ ದುರ್ಘಟನೆ ಸಂಭವಿಸಿದೆ. ಬ್ರೇಕ್ ಫೇಲ್ ಆಗಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಇದರ ಪರಿಣಾಮ 8 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಓರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ.
ಕೂಡಲೇ ಘಟನಾ ಸ್ಥಳಕ್ಕೆ ಗ್ರಾಮದ ಸ್ಥಳೀಯರು ದೌಡಾಯಿಸಿ ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಪರಿಣಾಮದಿಂದ ಸಾರಿಗೆ ಬಸ್ನ ಮುಂಭಾಗವು ಸಂಪೂರ್ಣವಾಗಿ ನಜ್ಜು ಗುಜ್ಜು ಆಗಿದೆ
ಸದ್ಯ ಘಟನಾ ಸ್ಥಳಕ್ಕೆ ತೆಕ್ಕಲಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಪ್ರಕರಣ ಕುರಿತು ತೆಕ್ಕಲಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post