ಬಿಹಾರದ ರಾಜಧಾನಿ ಪಾಟ್ನಾದಿಂದ ಆಘಾತಕಾರಿ ಸುದ್ದಿಯೊಂದು ಹೊರಬಂದಿದೆ. ಪಾಟ್ನಾದ ದಾನಪುರ ಪ್ರದೇಶದಲ್ಲಿ ಮರಳು ತುಂಬಿದ್ದ ದೋಣಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ.
ದುರ್ಘಟನೆಯಲ್ಲಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದೆ. ಪಾಟ್ನಾದ ಮನೇರ್ನ ಗಂಗಾ ಘಾಟ್ನಲ್ಲಿ ಅಕ್ರಮ ಮರಳುಗಾರಿಕೆ ದೋಣಿಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ದುರಂತ ಸಂಭವಿಸಿದೆ. ನಾಲ್ವರು ಕಾರ್ಮಿಕರು ಸಜೀವ ದಹನಗೊಂಡಿದ್ದು, ಬೋಟ್ನಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರಿದ್ದರು ಎನ್ನಲಾಗಿದೆ.
ಘಟನೆ ಬಗ್ಗೆ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ತನಿಖೆಯನ್ನ ಆರಂಭಿಸಿದ್ದಾರೆ. ಘಟನೆ ಹೇಗೆ ಆಯಿತು ಅನ್ನೋದ್ರ ಬಗ್ಗೆ ಪೊಲೀಸರಿಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post