ಬೆಂಗಳೂರು: ವಿಶ್ವ ಪೊಲೀಸ್ ಕ್ರೀಡಾಕೂಟದಲ್ಲಿ ಬೊಮ್ಮನಹಳ್ಳಿ ಠಾಣೆ ಇನ್ಸ್ ಪೆಕ್ಟರ್ ಪ್ರಶಾಂತ್.ಎಸ್ ಅವರು ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ವಿಶ್ವ ಪೊಲೀಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಬೆಂಗಳೂರಿನ ಇನ್ಸ್’ಪೆಕ್ಟರ್ ಪ್ರಶಾಂತ್.ಎಸ್ ಅವರು ಟೆನ್ನಿಸ್ ಸಿಂಗಲ್ಸ್ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ನೆದರ್ಲ್ಯಾಂಡ್ಸ್ ನ ರೋಟರ್ ಡ್ಯಾಂನಲ್ಲಿ ನಡೆದಿರೋ ಕ್ರೀಡಾಕೂಟ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.
ವಿಶ್ವ ಪೊಲೀಸ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದ ಏಕೈಕ ಪೊಲೀಸ್ ಇನ್ಸ್’ಪೆಕ್ಟರ್ ಎಂದು ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕಂಚಿನ ಪದಕ ಗೆದ್ದಿದ್ದಕ್ಕೆ ಇನ್ಸ್’ಪೆಕ್ಟರ್ ಪ್ರಶಾಂತ್ ಅವರಿಗೆ ಹಿರಿಯ ಅಧಿಕಾರಿಗಳಿಂದ ಶುಭಾಶಯ ಹರಿದು ಬರುತ್ತಿವೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post