ಕೊಪ್ಪಳ: ಕನಕಗಿರಿ ತಾಲೂಕು ಹುಲಿಹೈದರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದಿದೆ. ಗಲಾಟೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಯಂಕಪ್ಪ ಶ್ಯಾಮಪ್ಪ ತಳವಾರ (60), ಭಾಷಾ ಸಾಬ (22) ಮೃತ ದುರ್ದೈವಿಗಳು. ಧರ್ಮಣ್ಣ ಎಂಬ ಯುವಕನಿಗೆ ಗಂಭೀರ ಗಾಯವಾಗಿದೆ. ಸಾವು ಬದುಕಿ ನಡುವೆ ಯುವಕ ಹೋರಾಡ್ತಿದ್ದಾನೆ ಎನ್ನಲಾಗಿದೆ. ಕನಕಗಿರಿ ಠಾಣ ವ್ಯಾಪ್ತಿಯಲ್ಲಿ ಗಲಾಟೆ ನಡೆದಿದ್ದು, ವಾಲ್ಮಿಕಿ ಪ್ರತಿಮೆ ಪ್ರತಿಷ್ಠಾಣ ವಿಚಾರವಾಗಿ ಗಲಾಟೆ ಸಂಭವಿಸಿದೆ ಎನ್ನಲಾಗಿದೆ.
ಗಲಾಟೆ ತೀವ್ರವಾಗಿರುವ ಹಿನ್ನೆಲೆಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post