ವಿಜಯಪುರ: ದೇವಿ ದೀಪ ತರುತ್ತಿದ್ದ ಯುವಕನಿಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಚಡಚಣ ತಾಲೂಕಿನ ಹಲಸಂಗಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಕಿರಣ್ ಕೆಂಗಾರ್ (25) ಮೃತ ದುರ್ದೈವಿ.
ಮೃತ ಯುವಕನು ಜತ್ತ ತಾಲೂಕಿನ ಉಮದಿ ನಿವಾಸಿ. ನವರಾತ್ರಿ ಪ್ರಯುಕ್ತ ತುಳಜಾಪುರದಿಂದ ಅಂಬಾಭವಾನಿ ದೇಗುಲಕ್ಕೆ ಕಾಲ್ನಡಿಗೆಯ ಮೂಲಕ ದೀಪದ ಪಂಜು ತರುತ್ತಿದ್ದ ವೇಳೆ ಹಿಂಬದಿಯಿಂದ ಬಂದ ವಾಹನ ಗುದ್ದಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post