ಚಿತ್ರದುರ್ಗ: ಲಾರಿ, ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕನೋರ್ವ ಸಾವನ್ನಪ್ಪಿದ್ದಾನೆ. ಚಿತ್ರದುರ್ಗದ ಮುರುಘಾ ಮಠದ ಬಳಿ ಅಪಘಾತ ಸಂಭವಿಸಿದೆ. ನಿತೀಶ್ (18) ಮೃತ ಬೈಕ್ ಸವಾರ, ದವಳಗಿರಿ ಬಡಾವಣೆ ನಿವಾಸಿ.
ಬೈಕ್ ಚಾಲಕ ಅತೀ ವೇಗವಾಗಿ ಬರುತ್ತಿದ್ದ. ಈ ವೇಳೆ ಲಾರಿಗೆ ಡಿಕ್ಕಿಯಾಗಿ ಬೈಕ್ ಪೀಸ್ ಪೀಸ್ ಆಗಿದೆ. ಜತೆಗೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಚಿತ್ರದುರ್ಗ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post