ಬಳ್ಳಾರಿ: ಮಗನನ್ನ ಸಾಯಿಸಿ ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕೊಳಗಲ್ ಗ್ರಾಮದಲ್ಲಿ ನಡೆದಿದೆ.
ಯಂಕಪ್ಪ ಈಡಿಗೇರ್(32) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಐದು ವರ್ಷದ ಮಗ ವಿಜಯನನ್ನ ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾನೆ. ನಂತರ ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ.
ಯಂಕಪ್ಪ ಸಪ್ಟೆಂಬರ್ 14 ರಂದು ಪತ್ನಿಯನ್ನ ಕಳೆದುಕೊಂಡಿದ್ದ. ಜಮೀನಿಗೆ ತೆರಳುವ ವೇಳೆ ಆಟೋ ಕಾಲುವೆಗೆ ಮಗುಚಿ ಬಿದ್ದು ಪತ್ನಿ ಹುಲಿಗೆಮ್ಮ ಮೃತಪಟ್ಟಿದ್ದರು. ಪತ್ನಿ ಸಾವಿನ ನಂತರ ಮನನೊಂದಿದ್ದ ಯಂಕಪ್ಪ, ಓರ್ವ ಮಗನನ್ನ ಸಾಯಿಸಿ ತಾನೂ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post