ಹಾವೇರಿ: ಕಾಲುವೆಗೆ ಟ್ರಾಕ್ಟರ್ ಉರುಳಿ ರೈತ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ರಟ್ಟಿಹಳ್ಳಿ ತಾಲೂಕು ಕುಡುಪಲಿ ಗ್ರಾಮದ ಬಳಿ ನಡೆದಿದೆ. ಶರಣಪ್ಪ (46) ಮೃತ ರೈತ.
ಮೃತ ರೈತನು ರಟ್ಟಿಹಳ್ಳಿ ತಾಲೂಕಿನ ಕುಡುಪಲಿ ಗ್ರಾಮದ ನಿವಾಸಿ. ಶರಣಪ್ಪ ಮಹೀಂದ್ರಾ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಏಕಾಏಕಿ ರಸ್ತೆಯ ಪಕ್ಕದಲ್ಲಿದ್ದ ಕಲ್ಲಿನ ರಾಶಿ ಮೇಲೆ ಮಹಿಂದ್ರಾ ಟ್ರಾಕ್ಟರ್ ಉರುಳಿ ಬಿದ್ದಿದೆ. ಪರಿಣಾಮ ನೀರಿನ ಕಾಲುವೆಯಲ್ಲಿ ಮುಳುಗಿ ರೈತ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ರಟ್ಟಿಹಳ್ಳಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post