ಹಾವೇರಿ: ಬೈಕ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸವಾರ ಮೃತಪಟ್ಟಿರೋ ಘಟನೆ ಸವಣೂರು ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಬಸವರಾಜ ಬಿಕ್ಕಣ್ಣವರ ಮೃತ ಬೈಕ್ ಸವಾರ.
ಮೃತ ಬೈಕ್ ಸವಾರ ಉಪ್ಪಾರ ಓಣಿಯ ನಿವಾಸಿ. ಟಿಪ್ಪರ್ ಲಾರಿಯು ಕಲ್ಲು ಹಾಗೂ ಮರಳನ್ನು ತುಂಬಿಕೊಂಡು ವೇಗವಾಗಿ ಬಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಉಸಿರು ಚಲ್ಲಿದ್ದಾರೆ. ಇನ್ನು ಈ ದುರ್ಘಟನೆ ಕುರಿತಂತೆ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತಂತೆ ಸವಣೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post