ಚಿಕ್ಕಮಗಳೂರು: ಖಾಸಗಿ ಬಸ್ ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮಹಿಳೆ ಸಾವನ್ನಪ್ಪಿರೋ ಘಟನೆ ಎನ್ಆರ್ಪುರ ತಾಲೂಕಿನ ಮುತ್ತಿನ ಕೊಪ್ಪದಲ್ಲಿ ನಡೆದಿದೆ. ರತ್ನಮ್ಮ ಮೃತ ಮಹಿಳೆ.
ಅಪಘಾತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು 15 ಮಂದಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಎನ್ ಆರ್ ಪುರ ಹಾಗೂ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post