2018 ರಿಂದ ಯಾವುದೇ ಚುನಾವಣೆಗಳಲ್ಲಿ ಮತ ಹಾಕದ ಮಾಜಿ ಸಂಸದೆ
ಮಂಡ್ಯದ ವಿದ್ಯಾನಗರದಲ್ಲಿ ಮತ ಚಲಾಯಿಸುವ ಹಕ್ಕು ಹೊಂದಿರುವ ರಮ್ಯಾ
2023ರ MLA ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿ ಮತ ಹಾಕದೆ ನಿರ್ಲಕ್ಷ
ಮಂಡ್ಯ: 2018 ರಿಂದ ಯಾವುದೇ ಚುನಾವಣೆಗಳಲ್ಲಿ ಮತ ಹಾಕದ ಮಾಜಿ ಸಂಸದೆ ರಮ್ಯ ಈ ಬಾರಿಯಾದ್ರು ಮತ ಚಲಾಯಿಸುತ್ತಾರಾ? ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡಿದೆ. ಅನೇಕರು ನಟಿ ರಮ್ಯಾ ಬರುವಿಕೆಗಾಗಿ ಕಾಯುತ್ತಿದ್ದಾರೆ.
ಮೋಹಕ ತಾರೆ ರಮ್ಯ ಮಂಡ್ಯದಲ್ಲಿ ಮತದಾನದ ಹಕ್ಕು ಹೊಂದಿದ್ದಾರೆ. ಮಂಡ್ಯದ ವಿದ್ಯಾನಗರದ ಮತಗಟ್ಟೆಯಲ್ಲಿ ಮತ ಹಾಕಬೇಕಿದೆ. ಆದರೆ ಎರಡು ಎಂಎಲ್ಎ ಚುನಾವಣೆ, ತಲಾ ಒಂದು ಎಂಪಿ ಬೈ ಎಲೆಕ್ಷನ್ ಹಾಗೂ ಸಾರ್ವತ್ರಿಕ ಚುನಾವಣೆಗಳಲ್ಲಿ ಮತದಾನಕ್ಕೆ ಗೈರಾಗಿದ್ದರು. ಈ ಬಾರಿಯಾದರೂ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರಾ ಎಂಬ ಪ್ರಶ್ನೆ ಎಲ್ಲರನ್ನು ಕಾಡಿದೆ.
ಸ್ಯಾಂಡಲ್ ವುಡ್ ಕ್ವೀನ್ ಸ್ಥಳೀಯ ಸಂಸ್ಥೆ ಚುನಾವಣೆಗೂ ಮತಚಲಾಯಿಸಿರಲಿಲ್ಲ. 2023ರ ಎಂಎಲ್ಎ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿಯು ಮತ ಹಾಕದೆ ನಿರ್ಲಕ್ಷ ವಹಿಸಿದ್ದರು. ಮಾತ್ರವಲ್ಲದೆ, ಈ ಬಾರಿಯ ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದಾರೆ.
ಇದನ್ನೂ ಓದಿ: Loksabha Election 2024: ಮತದಾನದಂದು ಫೋಟೋ ಕ್ಲಿಕ್ಕಿಸಿ.. 25 ಸಾವಿರ ರೂಪಾಯಿ ಬಹುಮಾನ ಗೆಲ್ಲಿ
ಆದರೆ ಪ್ರಚಾರದಿಂದ ದೂರ ಉಳಿದರು ಈ ಬಾರಿ ಮತ ಚಲಾಯಿಸಿ ಜವಾಬ್ದಾರಿ ನಿರ್ವಹಿಸುತ್ತಾರಾ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಯುವ ಜನರಿಗೆ ಮಾದರಿಯಾಗಬೇಕಿದ್ದ ರಮ್ಯ ಮತದಾನದ ವಿಚಾರದಲ್ಲಿ ನಿರ್ಲಕ್ಷ್ಯವಹಿಸದೆ ಮತದಾನದಲ್ಲಿ ಭಾಗಿಯಾಗಲಿದ್ದಾರಾ ಎಂದು ಕಾದುನೋಡಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
2018 ರಿಂದ ಯಾವುದೇ ಚುನಾವಣೆಗಳಲ್ಲಿ ಮತ ಹಾಕದ ಮಾಜಿ ಸಂಸದೆ
ಮಂಡ್ಯದ ವಿದ್ಯಾನಗರದಲ್ಲಿ ಮತ ಚಲಾಯಿಸುವ ಹಕ್ಕು ಹೊಂದಿರುವ ರಮ್ಯಾ
2023ರ MLA ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿ ಮತ ಹಾಕದೆ ನಿರ್ಲಕ್ಷ
ಮಂಡ್ಯ: 2018 ರಿಂದ ಯಾವುದೇ ಚುನಾವಣೆಗಳಲ್ಲಿ ಮತ ಹಾಕದ ಮಾಜಿ ಸಂಸದೆ ರಮ್ಯ ಈ ಬಾರಿಯಾದ್ರು ಮತ ಚಲಾಯಿಸುತ್ತಾರಾ? ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡಿದೆ. ಅನೇಕರು ನಟಿ ರಮ್ಯಾ ಬರುವಿಕೆಗಾಗಿ ಕಾಯುತ್ತಿದ್ದಾರೆ.
ಮೋಹಕ ತಾರೆ ರಮ್ಯ ಮಂಡ್ಯದಲ್ಲಿ ಮತದಾನದ ಹಕ್ಕು ಹೊಂದಿದ್ದಾರೆ. ಮಂಡ್ಯದ ವಿದ್ಯಾನಗರದ ಮತಗಟ್ಟೆಯಲ್ಲಿ ಮತ ಹಾಕಬೇಕಿದೆ. ಆದರೆ ಎರಡು ಎಂಎಲ್ಎ ಚುನಾವಣೆ, ತಲಾ ಒಂದು ಎಂಪಿ ಬೈ ಎಲೆಕ್ಷನ್ ಹಾಗೂ ಸಾರ್ವತ್ರಿಕ ಚುನಾವಣೆಗಳಲ್ಲಿ ಮತದಾನಕ್ಕೆ ಗೈರಾಗಿದ್ದರು. ಈ ಬಾರಿಯಾದರೂ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರಾ ಎಂಬ ಪ್ರಶ್ನೆ ಎಲ್ಲರನ್ನು ಕಾಡಿದೆ.
ಸ್ಯಾಂಡಲ್ ವುಡ್ ಕ್ವೀನ್ ಸ್ಥಳೀಯ ಸಂಸ್ಥೆ ಚುನಾವಣೆಗೂ ಮತಚಲಾಯಿಸಿರಲಿಲ್ಲ. 2023ರ ಎಂಎಲ್ಎ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿಯು ಮತ ಹಾಕದೆ ನಿರ್ಲಕ್ಷ ವಹಿಸಿದ್ದರು. ಮಾತ್ರವಲ್ಲದೆ, ಈ ಬಾರಿಯ ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದಾರೆ.
ಇದನ್ನೂ ಓದಿ: Loksabha Election 2024: ಮತದಾನದಂದು ಫೋಟೋ ಕ್ಲಿಕ್ಕಿಸಿ.. 25 ಸಾವಿರ ರೂಪಾಯಿ ಬಹುಮಾನ ಗೆಲ್ಲಿ
ಆದರೆ ಪ್ರಚಾರದಿಂದ ದೂರ ಉಳಿದರು ಈ ಬಾರಿ ಮತ ಚಲಾಯಿಸಿ ಜವಾಬ್ದಾರಿ ನಿರ್ವಹಿಸುತ್ತಾರಾ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಯುವ ಜನರಿಗೆ ಮಾದರಿಯಾಗಬೇಕಿದ್ದ ರಮ್ಯ ಮತದಾನದ ವಿಚಾರದಲ್ಲಿ ನಿರ್ಲಕ್ಷ್ಯವಹಿಸದೆ ಮತದಾನದಲ್ಲಿ ಭಾಗಿಯಾಗಲಿದ್ದಾರಾ ಎಂದು ಕಾದುನೋಡಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ