ಉಡುಪಿ: ವಿದ್ಯಾರ್ಥಿನಿಯೊಬ್ಬಳು ನಾಯಿ ಜೊತೆ ಆಟವಾಡುತ್ತಾಳೆ ಎಂದು ಕೋಪಿಸಿಕೊಂಡು ನಾಯಿಯನ್ನೇ ಕೊಂದು ವಿಕೃತಿ ಮೆರೆದ ಘಟನೆ ಜಿಲ್ಲೆಯ ಕಾಪು ತಾಲೂಕಿನ ಬಂಟಕಲ್ನಲ್ಲಿ ನಡೆದಿದೆ.
ಬಂಟಕಲ್ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್ಮೆಂಟ್ ಕಾಲೇಜಿನ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯೊಬ್ಬಳು ನಿತ್ಯ ನಾಯಿ ಜೊತೆ ಆಟವಾಡುತ್ತಿದ್ದಳು. ಇದರಿಂದ ಕೋಪಿಸಿಕೊಂಡ ವಾರ್ಡನ್, ಹೊಡೆದು ಸಾಯಿಸಿದ್ದಾನೆ.
ನಾಯಿಗೆ ಮನಬಂದಂತೆ ಥಳಿಸಿ ಸಾಯಿಸಿರುವ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದೆ. ರಾಜೇಶ್ ವಿಕೃತಿ ಮೆರೆದ ವಾರ್ಡನ್. ಪಾಪಿ ವಾರ್ಡನ್ ಕೃತ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಘಟನೆ ಸಂಬಂಧ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post